Home » ಹಣದ ಜತೆಗೆ ತರಕಾರಿ, ಹಣ್ಣುಗಳನ್ನು ಲಂಚವಾಗಿ ಪಡೆಯುತ್ತಿದ್ದ ಅಧಿಕಾರಿಗಳು- ಕೊನೆಗೂ ಸಿಕ್ಕಿ ಬಿದ್ದರು

ಹಣದ ಜತೆಗೆ ತರಕಾರಿ, ಹಣ್ಣುಗಳನ್ನು ಲಂಚವಾಗಿ ಪಡೆಯುತ್ತಿದ್ದ ಅಧಿಕಾರಿಗಳು- ಕೊನೆಗೂ ಸಿಕ್ಕಿ ಬಿದ್ದರು

by Praveen Chennavara
0 comments

ಅಧಿಕಾರಿಗಳು ಹಣದ ಜೊತೆಗೆ ತರಕಾರಿ ಮತ್ತು ಹಣ್ಣುಗಳನ್ನು ಲಂಚವಾಗಿ ಪಡೆಯುತ್ತಿದ್ದ ಪ್ರಕರಣ ಕೇರಳದ ಆರ್‌ಟಿಒ ಚೆಕ್ ಪೋಸ್ಟ್‌ನಲ್ಲಿ ನಡೆದಿದೆ.

ಅಧಿಕಾರಿಗಳು ಲಾರಿಗಳ ಮೂಲಕ ಬರುತ್ತಿದ್ದ ಕುಂಬಳಕಾಯಿ, ಕಿತ್ತಳೆಯಂತಹ ತರಕಾರಿ ಮತ್ತು ಹಣ್ಣುಗಳನ್ನು ಲಂಚವಾಗಿ ಸ್ವೀಕರಿಸುತ್ತಿದ್ದರು. ಲಂಚವಾಗಿ ದೊ ರೆತ ಆ ತರಕಾರಿ ಮತ್ತು ಹಣ್ಣುಗಳನ್ನು ಆರ್‌ಟಿಒ ಚೆಕ್ ಪೋಸ್ಟ್‌ನಲ್ಲಿ ಇರುವ ಅಧಿಕಾರಿಗಳು ಮತ್ತು ಸಿಬ್ಬಂದಿ ಹಂಚಿಕೊಳ್ಳುತ್ತಿದ್ದರು.

ಈ ಬಗ್ಗೆ ಸಾಕಷ್ಟು ದೂರುಗಳು ಬಂದಿದ್ದವು. ಇದರಿಂದಾಗಿ ತನಿಖೆ ಕೈಗೊಂಡ ಪೊಲೀಸರು ಆರೋಪಿಗಳಿಗೆ ಬಲೆ ಬೀಸಿದ್ದಾರೆ. ಅಧಿಕಾರಿಗಳ ಮತ್ತು ಸಿಬ್ಬಂದಿ ಚಲಾಕಿತನದ ಬಗ್ಗೆ ಸುಳಿವು ಪಡೆದುಕೊಂಡ ಡಿವೈಎಸ್‌ಪಿ ಶಬರಿದುಲೆಗೆ ತೆರಳುವಂತೆ ನಟಿಸಿ ಸ್ಥಳಕ್ಕೆ ಆಗಮಿಸಿದ್ದಾರೆ.

ಈ ವೇಳೆ ಆರೋಪಿಗಳು ಬಲೆಗೆ ಬಿದ್ದಿದ್ದಾರೆ. ಕೇರಳದ ಪಾಲಕ್ಕಾಡ್ ಜಿಲ್ಲೆಯ ವಿಜಿಲೆನ್ಸ್ ಡಿವೈಎಸ್‌ಪಿ ಎಸ್. ಶಂಸುದ್ದೀನ್‌ ನೇತೃತ್ವದ ಅಧಿಕಾರಿಗಳು ಮತ್ತು ಸಿಬ್ಬಂದಿ ದಾಳಿ ನಡೆಸಿದ ಸಂದರ್ಭದಲ್ಲಿ ಈ ಅಂಶ ಬೆಳಕಿಗೆ ಬಂದಿದೆ. ಜೊತೆಗೆ 69,500 ರೂ. ನಗದು ವಶಪಡಿಸಿಕೊಳ್ಳಲಾಗಿದೆ.

You may also like

Leave a Comment