Home » Kallega Tiger Akshay murder: ಕಲ್ಲೇಗ ಟೈಗರ್ ಅಕ್ಷಯ್ ಹತ್ಯೆ ಪ್ರಕರಣ : ಆರೋಪಿಗಳನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿದ ಪೊಲೀಸರು

Kallega Tiger Akshay murder: ಕಲ್ಲೇಗ ಟೈಗರ್ ಅಕ್ಷಯ್ ಹತ್ಯೆ ಪ್ರಕರಣ : ಆರೋಪಿಗಳನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿದ ಪೊಲೀಸರು

0 comments
Kallega Tiger Akshay murder

Kallega Tiger Akshay murder: ಕಲ್ಲೇಗ ಟೈಗರ್ಸ್‌ ತಂಡದ ಮುಖ್ಯಸ್ಥ ಅಕ್ಷಯ್‌( Kallega Tiger Akshay murder)ಕಲ್ಲೇಗ ಕೊಲೆ ಪ್ರಕರಣದ ಆರೋಪಿಗಳನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ. ನ.7 ರಂದು ರಾತ್ರಿ ಆರೋಪಿಗಳನ್ನು ನ್ಯಾಯಾಧೀಶರ ಮನೆಗೆ ಹಾಜರುಪಡಿಸಲಾಗಿದ್ದು, ನ.8 ರಂದು ನ್ಯಾಯಾಲಯಕ್ಕೆ ಹಾಜರು ಪಡಿಸಲಾಗಿದೆ. ಚೇತನ್‌, ಮನೀಶ್‌, ಕೇಶವ, ಮಂಜುನಾಥ್‌ ಆರೋಪಿಗಳನ್ನು ನ್ಯಾಯಾಲಯದ ನ.8 ರಂದು ನ್ಯಾಯಾಲಯಕ್ಕೆ ಹಾಜರು ಪಡಿಸಲಾಗಿದ್ದು, ನ್ಯಾಯಾಧೀಶರು ನ.22 ರ ತನಕ ನ್ಯಾಯಾಂಗ ಕಸ್ಟಡಿಗೊಳಪಡಿಸಿ ಆದೇಶ ನೀಡಿದ್ದಾರೆ.

ಘಟನೆಯ ವಿವರ: ದಕ್ಷಿಣ ಕನ್ನಡ ಜಿಲ್ಲೆಯ, ಪುತ್ತೂರಿನ ಖ್ಯಾತ ಹುಲಿ ವೇಷ ಕುಣಿತ ತಂಡ ಟೈಗರ್ಸ್‌ ಕಲ್ಲೇಗ ತಂಡದ ಸಾರಥ್ಯ ವಹಿಸಿದ್ದ ಅಕ್ಷಯ್‌ ಕಲ್ಲೇಗ ಅವರು ಭೀಕರವಾಗಿ ಕೊಲೆಯಾಗಿದ್ದು, ಹತ್ಯೆಗೆ ಕೆಲವೇ ಕೆಲವು ಗಂಟೆಗಳ ಮೊದಲು ಕ್ಷುಲ್ಲಕ ಕಾರಣವೊಂದಕ್ಕೆ ಅಕ್ಷಯ್‌ ಹಾಗೂ ಕೃತ್ಯ ಎಸಗಿದ ತಂಡದ ಸದಸ್ಯರ ಮಧ್ಯೆ ಮಾತಿನ ವಾಗ್ಯುದ್ಧ ನಡೆದಿತ್ತು. ಅದಾದ ಸ್ವಲ್ಪ ಹೊತ್ತಿನ ನಂತರ ಅಕ್ಷಯ್‌ ರನ್ನು ನೆಹರೂ ನಗರಕ್ಕೆ ಬರಲು ಹೇಳಲಾಗಿತ್ತು. ಅಲ್ಲಿ ಪ್ಲಾನ್ ಮಾಡಿ ಹತ್ಯೆ ನಡೆಸಿದ್ದಾರೆ ಎಂದು ಹೇಳಲಾಗಿದೆ. ಈ ಕೃತ್ಯವು ಮಧ್ಯರಾತ್ರಿ ಸುಮಾರು 11.30 ಗಂಟೆ ಸುಮಾರಿಗೆ ಘಟಿಸಿದ ಮಾಹಿತಿಯಿದೆ.

ವಿವೇಕಾನಂದ ಕಾಲೇಜಿಗೆ ತೆರಳುವ ರಸ್ತೆಯಲ್ಲಿ ಹೆದ್ದಾರಿಯ ತುಸು ದೂರದಲ್ಲಿರುವ ಕೆನರಾ ಬ್ಯಾಂಕಿನ ಎಟಿಎಂ ಬಳಿ ಅಕ್ಷಯ್‌ ಮೇಲೆ ತಂಡ ದಾಳಿ ನಡೆಸಿದೆ. ನಂತರ ಅಲ್ಲಿಂದ ಆತನನ್ನು ಅಟ್ಟಾಡಿಸಿಕೊಂಡು ಬಂದು ತಲವಾರುನಿಂದ ದಾಳಿ ನಡೆಸಿದ್ದಾರೆ. ಮಾಣಿ ಮೈಸೂರು ಹೆದ್ದಾರಿಯನ್ನು ದಾಟಿ ಆಚೆ ಬದಿ ಗಿಡಗಂಟಿಗಳಿಂದ ಅವೃತ್ತವಾದ ಜಾಗದವರೆಗೂ ಅಟ್ಟಾಡಿಸಿಕೊಂಡು ಹೋಗಿ ಹತ್ಯೆ ನಡೆಸಿರುವುದು ಮೇಲ್ನೋಟಕ್ಕೆ ಕಂಡು ಬಂದಿದೆ. ಮಾಣಿ ಮೈಸೂರು ಹೆದ್ದಾರಿಯ ಒಂದು ಬದಿಯಿಂದ ಇನ್ನೊಂದು ಬದಿಯವರೆಗೆ ರಕ್ತದ ಕಲೆಗಳಿವೆ.

ಕೇವಲ 2000 ರೂಗೆ ನಡೆದಿತ್ತಾ ಕೊಲೆ ?
ಅಕ್ಷಯ್‌ ಮೃತದೇಹ ಕಾಲೇಜಿಗೆ ಹೋಗುವ ರಸ್ತೆಯ ವಿರುದ್ದ ದಿಕ್ಕಿನಲ್ಲಿ ಹೆದ್ದಾರಿಯ ಅಂಚಿನಲ್ಲಿರುವ ಪೊದೆ ಅವೃತ್ತವಾದ ಖಾಲಿ ಇರುವ ಬಿಸಾಡಿದ ಹಾಗಿತ್ತು. ಕೃತ್ಯ ನಡೆಸಿದ ತಂಡದಲ್ಲಿ ಒಟ್ಟು ಮೂವರು ಇದ್ದರು ಎಂದು ಶಂಕಿಸಲಾಗಿದೆ. ಈ ಪೈಕಿ ಇಬ್ಬರು ಕೃತ್ಯ ನಡೆದ ಕೆಲ ಗಂಟೆಯ ಬಳಿಕ ಈಗಾಗಲೇ ಪೊಲೀಸರಿಗೆ ಶರಣಾಗಿದ್ದಾರೆ ಎಂದು ತಿಳಿದು ಬಂದಿದ್ದು, ಅವರನ್ನು ವಶಕ್ಕೆ ಪಡೆದಿರುವ ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆಂದು ತಿಳಿದು ಬಂದಿದೆ. ಇನ್ನೊರ್ವ ಆರೋಪಿ ತಲೆಮರೆಸಿಕೊಂಡಿದ್ದಾನೆ ಎನ್ನುವ ಮಾಹಿತಿಯಿದೆ.

ನಿನ್ನೆ ಸಂಜೆ ವೇಳೆ ನಡೆದ ವಾಹನವೊಂದರ ಅಪಘಾತದ ವಿಚಾರದಲ್ಲಿ ಅಕ್ಷಯ್‌ ಹಾಗೂ ಎದುರಾಳಿ ಯುವಕರ ಮಧ್ಯೆ ಸಣ್ಣ ಮನಸ್ತಾಪ ಉಂಟಾಗಿತ್ತು. ಅದರ ರಿಪೇರಿ ಬಗ್ಗೆ ಮಾತನಾಡಲೆಂದು ಅಕ್ಷಯ್ ನನ್ನು ಕರೆಸಿಕೊಂಡ ಅದೇ ತಂಡ ಮಧ್ಯರಾತ್ರಿ ವೇಳೆ ನೆಹರೂ ನಗರ ಬಳಿ ಕರೆದು ಕೃತ್ಯ ಎಸಗಿದೆ ಎನ್ನಲಾಗುತ್ತಿದೆ. ಇದೆಲ್ಲಾ ನಡೆದದ್ದು ಕೇವಲ 2,000 ರೂಪಾಯಿಯ ಸಣ್ಣ ವ್ಯಾಜ್ಯಕ್ಕೆ ಎನ್ನಲಾಗುತ್ತಿದ್ದು ಆಶ್ಚರ್ಯ ಮೂಡಿಸುತ್ತದೆ. ಇಷ್ಟು ಸಣ್ಣ ಮೊತ್ತಕ್ಕೆ ಕೊಲೆಯ ಎನ್ನುವ ಪ್ರಶ್ನೆ ಮೂಡಿದೆ.

ಕಾಂತಾರಾ ಚಿತ್ರದ ಖ್ಯಾತಿಯ ನಂತರ ಕರಾವಳಿ ಭಾಗದಲ್ಲಿ ಸಾಂಪ್ರದಾಯಿಕ ಪ್ರದರ್ಶನ ಕಲೆಗಳು ವಿಜೃಂಭಿಸುತ್ತಿವೆ. ಅವುಗಳಲ್ಲಿ ಹುಲಿ ವೇಷ ಕೂಡ ಒಂದು. ದಸರಾ ಹಬ್ಬದ ಸಂದರ್ಭದಲ್ಲಿ ಸಾಂಪ್ರದಾಯಿಕವಾಗಿ ನಡೆಯುತ್ತಿದ್ದ ಹುಲಿ ವೇಷಗಳು ಇದೀಗ ತಮ್ಮ ಕಾಸ್ತ್ಯೂಮ್ ಅನ್ನು ಬದಲಿಸಿಕೊಂಡು, ಅದಕ್ಕೆ ಪ್ರೊಫೆಷನಲ್ ನೃತ್ಯವನ್ನು ಸೇರಿಸಿಕೊಂಡು ಸ್ಪರ್ಧಾತ್ಮಕವಾಗಿ ಹುಲಿವೇಷ ನಡೆಸುತ್ತಿವೆ. ಅಲ್ಲಲ್ಲಿ, ‘ಹುಲಿ ವೇಷದ ಸ್ಪರ್ಧೆ’, ‘ಹುಲಿ ಪಂಥ’ ಮುಂತಾದ ಕಾರ್ಯಕ್ರಮಗಳು ನಡೆಯುತ್ತಿವೆ. ಅಕ್ಷಯ್ ಕಲ್ಲೇಗ ಅಂತಹ ಸ್ಪರ್ಧಾತ್ಮಕ ಹುಲಿ ವೇಷಧಾರಿ. ತಮ್ಮದೇ ಊರಿನ ಹೆಸರನ್ನು ಇಟ್ಟುಕೊಂಡು ಪುತ್ತೂರಿನಲ್ಲಿ ‘ಕಲ್ಲೇಗ ಟೈಗರ್ಸ್’ ಎಂಬ ಹುಲಿ ವೇಷದ ತಂಡವನ್ನು ಆತ ನಿರ್ಮಿಸಿದ್ದ. ಹೋದಲ್ಲೆಲ್ಲ ತನ್ನ ವಿನೂತನ ಪ್ರದರ್ಶನ ಕಲೆಯ ಮೂಲಕ ಪ್ರಶಸ್ತಿ ಗೆದ್ದುಕೊಂಡು ಬರುತ್ತಿದ್ದರು. ಇದೀಗ ಹುಲಿ ಮರೆಯಾಗಿದೆ, ಸ್ಫುರದ್ರೂಪಿ ಯುವಕ ಇನ್ನಿಲ್ಲವಾಗಿದ್ದಾನೆ.

ಇದನ್ನೂ ಓದಿ: KPSCಯಿಂದ 30 ಇಲಾಖೆಗಳ 3 ಸಾವಿರ ಹುದ್ದೆಗಳಿಗೆ ನೇಮಕಾತಿ!!!

You may also like

Leave a Comment