Home » ಉದ್ಯೋಗಾಕಾಂಕ್ಷಿಗಳಿಗೆ ಗೃಹ ಸಚಿವರಿಂದ ಸಿಹಿಸುದ್ದಿ!

ಉದ್ಯೋಗಾಕಾಂಕ್ಷಿಗಳಿಗೆ ಗೃಹ ಸಚಿವರಿಂದ ಸಿಹಿಸುದ್ದಿ!

0 comments

ಬೆಂಗಳೂರು: ಉದ್ಯೋಗಕ್ಕಾಗಿ ಹುಡುಕಾಡುತ್ತಿರುವವರಿಗೆ ಗೃಹ ಸಚಿವ ಆರಗ ಜ್ಞಾನೇಂದ್ರ ಸಿಹಿಸುದ್ದಿ ನೀಡಿದ್ದು, ರಾಜ್ಯದಲ್ಲಿ ಈ ವರ್ಷ 2,000 ಅಗ್ನಿಶಾಮಕ ಹಾಗೂ ತುರ್ತು ಸೇವೆಗಳ ಹುದ್ದೆಗಳನ್ನು ಭರ್ತಿ ಮಾಡಲಾಗುತ್ತಿದೆ ಎಂದು ತಿಳಿಸಿದ್ದಾರೆ.

ಬೆಂಗಳೂರು ಮೆಟ್ರೋ ರೈಲು ನಿಗಮ ವತಿಯಿಂದ ನಿರ್ಮಿಸಿರುವ ಜಯನಗರ ಅಗ್ನಿಶಾಮಕ ಠಾಣೆ ನೂತನ ಕಟ್ಟಡ ಉದ್ಘಾಟಿಸಿ ಮಾತನಾಡಿದ ಅವರು, ಜನತೆಯ ಪ್ರಾಣ ಹಾಗೂ ಆಸ್ತಿ ರಕ್ಷಣೆಗೆ, ರಾಜ್ಯ ಸರಕಾರ ಎಲ್ಲಾ ಸಾಧ್ಯವಾದ ಕ್ರಮಗಳನ್ನು ಕೈಗೊಳ್ಳುತ್ತದೆ ಎಂದರು.

ಅಗ್ನಿಶಾಮಕ ಇಲಾಖೆಗೆ ಅತ್ಯಾಧುನಿಕ ಸೌಲಭ್ಯಗಳನ್ನು ಕಲ್ಪಿಸಲು ರಾಜ್ಯ ಸರಕಾರ ವಿಶೇಷ ಆದ್ಯತೆ ನೀಡುತ್ತದೆ, ಹಾಗೂ ಹೆಚ್ಚಿನ ಅನುದಾನ ಒದಗಿಸಲಾಗುತ್ತದೆ ಎಂದು ತಿಳಿಸಿದ್ದಾರೆ. ಅಲ್ಲದೆ, ಈ ಬಾರಿ ಒಟ್ಟು 2,000 ಅಗ್ನಿಶಾಮಕ ಹಾಗೂ ತುರ್ತು ಸೇವೆಗಳ ಹುದ್ದೆಗಳನ್ನು ಭರ್ತಿ ಮಾಡಲಾಗುತ್ತಿದೆ ಎಂದು ತಿಳಿಸಿದ್ದಾರೆ.

You may also like

Leave a Comment