0
Belthangady : ವ್ಯಕ್ತಿಯೊಬ್ಬರು ಮನೆಯ ಬಾತ್ರೂಮ್ ನಲ್ಲೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಬೆಳಾಲು ಗ್ರಾಮದಲ್ಲಿ ಬೆಳಕಿಗೆ ಬಂದಿದೆ.
ಹೌದು, ಬೆಳಾಲು ಗ್ರಾಮದ ಮಾಯ ನೆಕ್ಕಿಲಾಡಿ ನಿವಾಸಿ ಕೊರಗಪ್ಪ (48) ಆತ್ಮಹತ್ಯೆ ಮಾಡಿಕೊಂಡ ದುರ್ದೈವಿ. ಅವರು ಮನೆಯ ಬಾತ್ ರೂಂ ನಲ್ಲಿ ಎ.10 ರಂದು ರಾತ್ರಿ ನೇಣುಬಿಗಿದು ಆತ್ಮಹ*ತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ.
ಮನೆಯಲ್ಲಿ ಪತ್ನಿ ಮಕ್ಕಳು ಕಾರ್ಯಕ್ರಮ ಹೋಗಿದ್ದ ವೇಳೆ ಘಟನೆ ನಡೆದಿದೆ. ಎ.11 ರಂದು ಬೆಳಗ್ಗೆ ಮನೆಗೆ ಮಕ್ಕಳು ನೋಡಿದಾಗ ಬೆಳಕಿಗೆ ಬಂದಿದೆ. ಮೃ*ತ ಕೊರಗಪ್ಪರಿಗೆ ಪತ್ನಿ ಹಾಗೂ ಇಬ್ಬರು ಗಂಡು ಮಕ್ಕಳು, ಒಂದು ಹೆಣ್ಣು ಮಗಳಿದ್ದಾರೆ. ಸದ್ಯ ಧರ್ಮಸ್ಥಳ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
