Home » ಬಂಟ್ವಾಳ : ಸಾಲಬಾಧೆಯಿಂದ ನೊಂದು ಕೆರೆಗೆ ಹಾರಿ ವ್ಯಕ್ತಿ ಆತ್ಮಹತ್ಯೆ !

ಬಂಟ್ವಾಳ : ಸಾಲಬಾಧೆಯಿಂದ ನೊಂದು ಕೆರೆಗೆ ಹಾರಿ ವ್ಯಕ್ತಿ ಆತ್ಮಹತ್ಯೆ !

0 comments

ಬಂಟ್ವಾಳ : ಯುವಕನೊಬ್ಬ ಆತ್ಮಹತ್ಯೆ ಮಾಡಿಕೊಂಡ ಘಟನೆಯೊಂದು ತಾಲೂಕಿನ ಪುಂಜಾಲಕಟ್ಟೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಸಾಲಬಾಧೆಯಿಂದ ಕೆರೆಗೆ ಹಾರಿ ವ್ಯಕ್ತಿ ಮೃತಟಪಟ್ಟಿದ್ದಾನೆ.

ಮಾಲಾಡಿ ನಿವಾಸಿ ಅವಿವಾಹಿತ ಪ್ರಶಾಂತ್(33) ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿ. ಈತ ದಿನಸಿ ಅಂಗಡಿಯಲ್ಲಿ ಕೆಲಸ ಮಾಡುತ್ತಿದ್ದು, ವಿಪರೀತ ಸಾಲ ಮಾಡಿದ್ದು, ಮಾಡಿದ್ದ ಸಾಲ ತೀರಿಸಲು ಸಾಧ್ಯವಾಗದೆ ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ.

ಪುಂಜಾಲಕಟ್ಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

You may also like

Leave a Comment