4
Mangaluru-Udupi IT Raid: ಕರ್ನಾಟಕದಲ್ಲಿ ನಿನ್ನೆ ಹಲವೆಡೆ ಲೋಕಾಯುಕ್ತ ದಾಳಿ ಮಾಡಿದ ವರದಿಯಾಗಿತ್ತು. ಇದೀಗ ಬೆಳ್ಳಂಬೆಳಗ್ಗೆ ಕರಾವಳಿ ಭಾಗದಲ್ಲಿ ಬಿರುಸಿನ ಐಟಿ ದಾಳಿ ನಡೆದಿದೆ.
ಉಡುಪಿ, ಕಾರ್ಕಳ, ಕುಂದಾಪುರ, ಪಡುಬಿದ್ರಿ, ಬ್ರಹ್ಮಾವರ, ಪುತ್ತೂರು ಸೇರಿದಂತೆ ಹಲವೆಡೆ ಚಿನ್ನದ ಅಂಗಡಿಗಳ ಮೇಲೆ ಐಟಿ ದಾಳಿಯಾಗಿದೆ. ಪ್ರಸಿದ್ಧ ಚಿನ್ನದ ಮಳಿಗೆಗಳ ಮೇಲೆ ಏಕಕಾಲದಲ್ಲಿ ಐಟಿ ಅಧಿಕಾರಿಗಳು ದಾಳಿ ಮಾಡಿದ್ದು, ದಾಖಲೆ ಪರಿಶೀಲನೆಯಲ್ಲಿ ತೊಡಗಿದ್ದಾರೆ.
ಏಳೆಂಟು ವಾಹನದಲ್ಲಿ ಬಂದ ಅಧಿಕಾರಿಗಳ ತಂಡ ಪರಿಶೀಲನೆಯಲ್ಲಿ ತೊಡಗಿದ್ದು, ಹೆಚ್ಚಿನ ಮಾಹಿತಿ ಇನ್ನಷ್ಟೇ ತಿಳಿದು ಬರಬೇಕಿದೆ.
ಇದನ್ನೂ ಓದಿ: ಹಬ್ಬ ಹರಿದಿನಗಳಲ್ಲಿ ದೊರೆಯುವ ಗಿಫ್ಟ್ಗೆ ನೀವು ತೆರಿಗೆ ಪಾವತಿ ಮಾಡುತ್ತೀರಾ? ಯಾಕೆ, ಎಷ್ಟು ತೆರಿಗೆ ಪಾವತಿ ಮಾಡಬೇಕು ಗೊತ್ತೇ?
