Home » Dead Body In Pickup: ಪುತ್ತೂರು: ದಲಿತ ಕಾರ್ಮಿಕನ ಶವ ರಸ್ತೆಯಲ್ಲಿ ಬಿಟ್ಟು ಹೋದ ಪಿಕಪ್ ಡ್ರೈವರ್!

Dead Body In Pickup: ಪುತ್ತೂರು: ದಲಿತ ಕಾರ್ಮಿಕನ ಶವ ರಸ್ತೆಯಲ್ಲಿ ಬಿಟ್ಟು ಹೋದ ಪಿಕಪ್ ಡ್ರೈವರ್!

1 comment

Dead Body In Pickup: ದಲಿತ ಕಾರ್ಮಿಕನ ಶವವನ್ನು ರಸ್ತೆಯಲ್ಲಿ ಬಿಟ್ಟು ಹೋದ ಅಮಾನವೀಯ ಘಟನೆ ಪುತ್ತೂರಿನಲ್ಲಿ ನಡೆದಿದೆ.

ಹೌದು, ದಲಿತ ಕಾರ್ಮಿಕನ ಮೃತ ದೇಹವನ್ನು ಪಿಕಪ್ ವಾಹನದಲ್ಲಿ ( Dead Body In Pickup) ತಂದು ಮನೆಯ ಮುಂದಿನ ರಸ್ತೆ ಸಮೀಪ ಮಲಗಿಸಿ ಹೋದ ಘಟನೆಯೊಂದು ಸಾಲ್ಮರ ಸಮೀಪದ ಕೆರೆಮೂಲೆಯಲ್ಲಿ ನ.16ರಂದು ನಡೆದಿದ್ದು, ಘಟನೆಗೆ ಸಂಬಂಧಿಸಿ ಪೊಲೀಸರು ತನಿಖೆ ನಿಧಾನಗೊಳಿಸಿದ್ದನ್ನು ವಿರೋಧಿಸಿ ದಲಿತ ಸಂಘಟನೆಗಳು ಹಾಗೂ ಹಿಂದೂ ಮುಖಂಡರು ಪ್ರತಿಭಟನೆ ನಡೆಸಿ ಪಿಕಪ್ ವಾಹನವನ್ನು ಜಪ್ತಿ ಗೊಳಿಸಲಾಯಿತು.

ಮಾಹಿತಿ ಪ್ರಕಾರ, ಸಾಲ್ಮರ ಕೆರೆಮೂಲೆ ನಿವಾಸಿ ಸಿಮೆಂಟ್ ಸಾರಣೆ ಮೇಸ್ತ್ರೀ ಜೊತೆ ಸಹಾಯಕರಾಗಿ ಹೋಗುತ್ತಿದ್ದ ಕೂಲಿ ಕಾರ್ಮಿಕ, ಪರಿಶಿಷ್ಟ ಜಾತಿಗೆ ಸೇರಿದ ಶಿವಪ್ಪ (69ವ)ರವರು ಮೃತಪಟ್ಟವರು. ಶಿವಪ್ಪ ಅವರು ನ.16ರಂದು ಬೆಳಿಗ್ಗೆ ಮನೆಯಲ್ಲಿದ್ದ ಸಂದರ್ಭ ಸಾಲ್ಮರ ತಾವೋ ಇಂಡಸ್ಟ್ರೀಸ್‌ನ ಹೆನ್ರಿ ತಾವೋ ಅವರು ಕೆಲಸಕ್ಕೆಂದು ಪಿಕಪ್ ವಾಹನದಲ್ಲಿ ಕರೆದುಕೊಂಡು ಹೋಗಿದ್ದಾರೆ. ಮಧ್ಯಾಹ್ನದ ವೇಳೆ ಅದೇ ಪಿಕಪ್ ವಾಹನದಲ್ಲಿ ಅವರನ್ನು ಕರೆದುಕೊಂಡು ಬಂದು ರಸ್ತೆ ಬದಿಯಲ್ಲಿ ಮಲಗಿಸಿ ಹೋಗಿದ್ದಾರೆ. ಶಿವಪ್ಪವರು ಅದಾಗಲೇ ಮೃತಪಟ್ಟಿದ್ದರು.

ಈ ಅಮಾನವೀಯ ಘಟನೆಯನ್ನು ಖಂಡಿಸಿ ಇಂದು ದಲಿತ ಸಂಘಟನೆಗಳು ಪುತ್ತೂರು ನಗರ ಪೊಲೀಸ್‌ ಠಾಣೆಯ ಮುಂದೆ ಜಮಾಯಿಸಿದ್ದು, ಕೂಡಲೇ ಸ್ಥಳಕ್ಕೆ ಬಂದ ಬಿಜೆಪಿ ಮುಖಂಡ ಅರುಣ್‌ ಕುಮಾರ್ ಪುತ್ತಿಲ ಠಾಣಾಧಿಕಾರಿಗಳ ಜೊತೆ ಮಾತುಕತೆ ನಡೆಸಿ ಪೊಲೀಸರು ಹಾಗೂ ದಲಿತ ಸಂಘಟನಾ ಕಾರ್ಯಕರ್ತರ ಜೊತೆ ಸಾಲ್ಮರದ ತಾವೋ ಮಿಲ್ ಗೆ ತೆರಳಿ ಗೇಟ್‌ ತೆರೆದು ಹೆಣ ಸಾಗಿಸಿದ ಪಿಕಪ್ ವಾಹನವನ್ನು ಪೊಲೀಸರು ಜಪ್ತಿ ಮಾಡಿದ್ದಾರೆ .

You may also like

Leave a Comment