1
ಮದುವೆ ಮನೆಯಲ್ಲಿ ಕೊರಗಜ್ಜನ ವೇಷ ಧರಿಸಿ ಅವಹೇಳನ ನಡೆಸಿದ ಮದುಮಗನ ಮಂಜೇಶ್ವರದಲ್ಲಿರುವ ಮನೆಗೆ ಕಿಡಿಗೇಡಿಗಳು ದಾಳಿ ನಡೆಸಿದ್ದು,ಘಟನೆಯಿಂದಾಗಿ ಮನೆಗೆ ಹಾನಿಯಾಗಿದೆ.
ಬೈಕ್ ನಲ್ಲಿ ಬಂದಿದ್ದ ಕಿಡಿಗೇಡಿಗಳು ಈ ಕೃತ್ಯ ಎಸಗಿದ್ದಾಗಿ ತಿಳಿದುಬಂದಿದ್ದು,ಮಂಜೇಶ್ವರದಲ್ಲಿರುವ ವರನ ಮನೆಯ ಗೇಟ್ ಗೆ ಕಾವಿ ಬಣ್ಣ ಬಳಿದು,ಮನೆಯ ಕಿಟಕಿಗೆ ಕಲ್ಲೆಸೆದು ಹಾನಿಗೈಯ್ಯಲಾಗಿದೆ.
ಕಿಡಿಗೇಡಿಗಳ ಕೃತ್ಯವನ್ನು ಕಂಡ ಮನೆಮಂದಿ ಗಾಬರಿಯಿಂದ ಬೊಬ್ಬೆ ಹೊಡೆದಾಗ ಪರಾರಿಯಾಗಿದ್ದು, ಈ ಬಗ್ಗೆ ಮಂಜೇಶ್ವರ ಠಾಣೆಗೆ ದೂರು ನೀಡಲಾಗಿದೆ.
