Home » ಸೇನಾ ಹೆಲಿಕಾಪ್ಟರ್ ದುರಂತ ಪ್ರಕರಣ | ಇನ್ನು ಪತ್ತೆಯಾಗಿಲ್ಲ ಏಳು ಜನರ ಪಾರ್ಥೀವ ಶರೀರದ ಗುರುತು !!

ಸೇನಾ ಹೆಲಿಕಾಪ್ಟರ್ ದುರಂತ ಪ್ರಕರಣ | ಇನ್ನು ಪತ್ತೆಯಾಗಿಲ್ಲ ಏಳು ಜನರ ಪಾರ್ಥೀವ ಶರೀರದ ಗುರುತು !!

by ಹೊಸಕನ್ನಡ
0 comments

ಭಾರತೀಯ ಸೇನೆಯ ರಕ್ಷಣಾ ಪಡೆಗಳ ಮುಖ್ಯಸ್ಥ ಜನರಲ್ ಬಿಪಿನ್ ರಾವತ್ ಸೇರಿ 13 ಜನರು ಡಿಸೆಂಬರ್ 8 ರಂದು ಸಂಭವಿಸಿದ ಭೀಕರ ಅಪಘಾತದಲ್ಲಿ ಅಸುನೀಗಿದ್ದಾರೆ. ಇವರ ಸಾವು ಇಡೀ ರಾಷ್ಟ್ರಕ್ಕೆ ತುಂಬಲಾರದ ನಷ್ಟ.

ಹೆಲಿಕಾಪ್ಟರ್ ದುರಂತದಲ್ಲಿ ಮೃತಪಟ್ಟ 13 ಜನರ ಪೈಕಿ 6 ಜನರ ಗುರುತು ಪತ್ತೆಯಾಗಿದೆ. ಆದರೆ 7 ಜನರ ಪಾರ್ಥಿವ ಶರೀರದ ಗುರುತು ಇನ್ನೂ ಪತ್ತೆಯಾಗಿಲ್ಲ. 7 ಪಾರ್ಥಿವ ಶರೀರಗಳ ಗುರುತು ಪತ್ತೆಗಾಗಿ ಡಿಎನ್‌ಎ ಪರೀಕ್ಷೆ ನಡೆಸಲಾಗಿದೆ.

ನಿನ್ನೆ ಪೃಥ್ವಿ ಸಿಂಗ್ ಚೌಹಾಣ್ ಪಾರ್ಥಿವ ಶರೀರದ ಗುರುತು ಪತ್ತೆ ಮಾಡಲಾಗಿತ್ತು. ಎಐಎಫ್ ಕಮಾಂಡರ್ ಪೃಥ್ವಿ ಸಿಂಗ್ ಚೌಹಾಣ್ ಅಂತ್ಯಕ್ರಿಯೆ ಇಂದು ಉತ್ತರಪ್ರದೇಶದ ಆಗ್ರಾದಲ್ಲಿ ನಡೆಯಲಿದೆ. ದೆಹಲಿಯಿಂದ ಆಗ್ರಾಕ್ಕೆ ಮೃತದೇಹ ಕೊಂಡೊಯ್ಯಲಿದ್ದು, ಅಂತಿಮ ದರ್ಶನದ ಬಳಿಕ ಅಂತ್ಯಕ್ರಿಯೆ ನೆರವೇರಿಸಲಾಗುವುದು. ಪೃಥ್ವಿ ಸಿಂಗ್ ಪತನವಾದ ಹೆಲಿಕಾಪ್ಟರ್‌ನ ಪೈಲೆಟ್ ಆಗಿದ್ದರು.

ಮೃತಪಟ್ಟಿದ್ದವರಲ್ಲಿ 6 ಜನರ ಗುರುತು ಮಾತ್ರ ಪತ್ತೆಯಾಗಿದೆ. ದುರಂತದಲ್ಲಿ ಮೃತ ಪಟ್ಟಿದ್ದ ಲ್ಯಾನ್ಸ್ ನಾಯಕ್ ಸಾಯಿ ತೇಜ ಮತ್ತು ಲ್ಯಾನ್ಸ್ ನಾಯಕ್ ವಿವೇಕ್ ಕುಮಾರ್ ಗುರುತು ಪತ್ತೆಯಾಗಿದ್ದು, ಇಬ್ಬರ ಪಾರ್ಥಿವ ಶರೀರಗಳನ್ನು ಇಂದು ಕುಟುಂಬಸ್ಥರಿಗೆ ಹಸ್ತಾಂತರ ಮಾಡಲಾಗುತ್ತದೆ.

You may also like

Leave a Comment