Home » ಇನ್ನು ಮುಂದೆ ರೈತರ ಮನೆ ಬಾಗಿಲಿಗೆ ಉಚಿತವಾಗಿ ಬರಲಿದೆ ಆರ್.ಟಿ.ಸಿ | ಕಂದಾಯ ಸಚಿವ ಆರ್. ಅಶೋಕ್ ಹೇಳಿಕೆ

ಇನ್ನು ಮುಂದೆ ರೈತರ ಮನೆ ಬಾಗಿಲಿಗೆ ಉಚಿತವಾಗಿ ಬರಲಿದೆ ಆರ್.ಟಿ.ಸಿ | ಕಂದಾಯ ಸಚಿವ ಆರ್. ಅಶೋಕ್ ಹೇಳಿಕೆ

0 comments

ವಿಜಯಪುರ: ರೈತರ ಭೂಮಿ ಕುರಿತು ಮಾತಾಡಿದ ಕಂದಾಯ ಸಚಿವ ಆರ್. ಅಶೋಕ್ ರೈತರ ಮನೆ ಬಾಗಿಲಿಗೆ ಉಚಿತವಾಗಿ ಆರ್.ಟಿ.ಸಿ., ಪಹಣಿ, ಸ್ಕೆಚ್ ಕಾಪಿ ನೀಡಲಾಗುವುದು ಎಂದು ತಿಳಿಸಿದ್ದಾರೆ.

ವಿಜಯಪುರದಲ್ಲಿ ನಡೆದ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ರೈತರ ಜಮೀನುಗಳಿಗೆ ನ್ಯಾಯವಾದ ಬೆಲೆ ಒದಗಿಸಲು 79 /ಎ/ಬಿ ತೆಗೆದುಹಾಕಲಾಗಿದೆ.ಗ್ರಾಮ ವಾಸ್ತವ್ಯದ ಮೂಲಕ ಜಿಲ್ಲಾಧಿಕಾರಿಗಳು, ಉಪ ವಿಭಾಗಾಧಿಕಾರಿಗಳು ಸೇರಿದಂತೆ ಅಧಿಕಾರಿಗಳು ಗ್ರಾಮದಲ್ಲಿ ವಾಸ್ತವ್ಯ ಮಾಡಿ ಜನರ ಸಮಸ್ಯೆಗಳಿಗೆ ಸ್ಥಳದಲ್ಲಿಯೇ ಪರಿಹಾರ ಒದಗಿಸುವ ಕಾರ್ಯಕ್ರಮ ರೂಪಿಸಲಾಗಿದೆ ಎಂದು ಹೇಳಿದ್ದಾರೆ.

ರಾಜ್ಯದಲ್ಲೆಡೆ ಆರ್.ಟಿ.ಸಿ. ಅಭಿಯಾನ ನಡೆಸಲಿದ್ದು,ಒಂದೇ ದಿನದಲ್ಲಿ ಭೂ ಪರಿವರ್ತನೆ ಮಾಡಲು ನಿಯಮವನ್ನು ಸರಳಿಕರಣ ಮಾಡಲಾಗಿದೆ.ಒಂದೇ ದಿನದಲ್ಲಿ ರಾಜ್ಯದ ಸುಮಾರು 40 ಲಕ್ಷ ರೈತರ ಮನೆ ಬಾಗಿಲಿಗೆ ಉಚಿತವಾಗಿ ಆರ್.ಟಿ.ಸಿ. ನಕ್ಷೆ ಮತ್ತು ಪಹಣಿ ತಲುಪಿಸಲು ಯೋಜನೆ ರೂಪಿಸಲಾಗಿದೆ ಎಂದು ತಿಳಿಸಿದ್ದಾರೆ.

You may also like

Leave a Comment