Home » ಇನ್ನು ಮುಂದೆ ಸಾರ್ವಜನಿಕ ಕುಂದುಕೊರತೆಗಳ ಪರಿಹಾರ ತುಂಬಾ ಸುಲಭ !! | ಸಮಸ್ಯೆ ದಾಖಲಿಸಲು ಸಮಗ್ರ ವೇದಿಕೆ ತಯಾರಿಸಿದೆ ರಾಜ್ಯ ಸರ್ಕಾರ

ಇನ್ನು ಮುಂದೆ ಸಾರ್ವಜನಿಕ ಕುಂದುಕೊರತೆಗಳ ಪರಿಹಾರ ತುಂಬಾ ಸುಲಭ !! | ಸಮಸ್ಯೆ ದಾಖಲಿಸಲು ಸಮಗ್ರ ವೇದಿಕೆ ತಯಾರಿಸಿದೆ ರಾಜ್ಯ ಸರ್ಕಾರ

0 comments

ಕರ್ನಾಟಕ ಸರ್ಕಾರದ ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ವೇದಿಕೆ (ಇ-ಆಡಳಿತ) ವತಿಯಿಂದ ಏಕೀಕೃತ ಸಾರ್ವಜನಿಕ ಕುಂದುಕೊರತೆ ನಿವಾರಣೆಗಾಗಿ ಜನಸ್ಪಂದನ ವ್ಯವಸ್ಥೆಯನ್ನು ಜಾರಿಗೆ ತರಲಾಗಿದ್ದು, ನಾಗರಿಕರ ಕುಂದುಕೊರತೆಗಳನ್ನು ದಾಖಲಿಸಲು ಜನಸ್ಪಂದನ ಸಮಗ್ರ ವೇದಿಕೆಯಾಗಿದೆ.

ಸಾರ್ವಜನಿಕರು ಜನಸ್ಪಂದನ ಮೊಬೈಲ್ ಆ್ಯಪ್ ಅಥವಾ ಐ.ಪಿ.ಜಿ.ಆರ್.ಎಸ್ ವೆಬ್‌ಸೈಟ್ https://ipgrs.karnataka.gov.in ಮೂಲಕ ತಮ್ಮ ಕುಂದುಕೊರತೆಗಳನ್ನು ದಾಖಲಿಸಬಹುದು.

ಜನಸ್ಪಂದನ ವೈಶಿಷ್ಟ್ಯಗಳು:

ಸರ್ಕಾರದ ಯಾವುದೇ ಸೇವೆ ಅಥವಾ ಯೋಜನೆಯನ್ನು ಪಡೆಯುವಲ್ಲಿ ಯಾವುದೇ ವಿಳಂಬ, ನಿರಾಕರಣೆ, ತೊಂದರೆ ಉಂಟಾದಲ್ಲಿ ದೂರು ದಾಖಲಿಸಬಹುದು.
ವೆಬ್ ಪೋರ್ಟಲ್, ಮೊಬೈಲ್ ಆ್ಯಪ್, ಸಹಾಯವಾಣಿ 1902 ಮತ್ತು ಬಾಪೂಜಿ ಸೇವಾ ಕೇಂದ್ರಗಳ ಮುಖಾಂತರ ಕುಂದುಕೊರತೆ ಅಥವಾ ದೂರು ದಾಖಲಿಸಲು ಅವಕಾಶವಿದ್ದು,  ದೂರು ದಾಖಲಾದ ಕೂಡಲೇ ನಾಗರಿಕರಿಗೆ ‘ಸ್ವೀಕೃತಿ’ ಸಂದೇಶ ರವಾನೆಯಾಗುತ್ತದೆ. ಸಂಬಂಧಪಟ್ಟ ಇಲಾಖೆಯ ಕ್ಷೇತ್ರ ಅನುಷ್ಠಾನಾಧಿಕಾರಿಗೆ ನಿವಾರಣೆ ಕ್ರಮ ವಹಿಸಲು ಕುಂದುಕೊರತೆ ಅರ್ಜಿಯ ರವಾನಿಸಲಾಗುತ್ತದೆ. ನಿಗದಿತ ಅವಧಿಯಲ್ಲಿ ಕುಂದುಕೊರತೆ ನಿವಾರಣೆಗೆ ಕ್ರಮ ಕೈಗೊಳ್ಳಲಾಗುವುದು. ಕಾಲಾವಧಿ ಮೀರಿದರೆ, ಸ್ವಯಂಚಾಲಿತವಾಗಿ ಮೇಲಾಧಿಕಾರಿಗೆ ಕುಂದುಕೊರತೆಯ ವರ್ಗಾವಣೆಯಾಗುತ್ತದೆ.

ಕುಂದುಕೊರತೆ ನಿವಾರಣೆ ತೃಪ್ತಿಕರವಾಗಿರುವ ಕುರಿತು ಅಭಿಪ್ರಾಯ ಸಂಗ್ರಹಿಸಲಾಗುತ್ತದೆ. ನಾಗರಿಕರ ಕುಂದುಕೊರತೆಗಳನ್ನು ದಾಖಲಿಸುವ ಕುರಿತಂತೆ ನೆರವಿಗಾಗಿ ಸಹಾಯವಾಣಿ 1902ಕ್ಕೆ ಕರೆಮಾಡಬಹುದಾಗಿದೆ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.

You may also like

Leave a Comment