Home » EPFO 2014 ರ ತಿದ್ದುಪಡಿ ಎತ್ತಿಹಿಡಿದ ಸುಪ್ರೀಂ | ಹೆಚ್ಚು ಪಿಂಚಣಿ ಬಯಸಿದವರಿಗೆ ಲಾಭವೇ ? ನಷ್ಟವೇ?

EPFO 2014 ರ ತಿದ್ದುಪಡಿ ಎತ್ತಿಹಿಡಿದ ಸುಪ್ರೀಂ | ಹೆಚ್ಚು ಪಿಂಚಣಿ ಬಯಸಿದವರಿಗೆ ಲಾಭವೇ ? ನಷ್ಟವೇ?

0 comments

2014ರ ಉದ್ಯೋಗಿಗಳ ಭವಿಷ್ಯನಿಧಿ ತಿದ್ದುಪಡಿ ಯೋಜನೆಯನ್ನು ಪರಿಗಣಿಸಿರುವ ಸುಪ್ರೀಂ ಕೋರ್ಟ್ ಈ ವಿಚಾರವಾಗಿ ಕೇರಳ, ರಾಜಸ್ಥಾನ ಮತ್ತು ದೆಹಲಿ ಹೈಕೋರ್ಟ್ ನೀಡಿದ್ದ ತೀರ್ಪನ್ನು ಸರ್ವೋಚ್ಚ ನ್ಯಾಯಾಲಯ ತಳ್ಳಿಹಾಕಿದೆ.

ಸುಪ್ರೀಂ ಕೋರ್ಟ್ (Supreme Court) ‘2014ರ ಉದ್ಯೋಗಿಗಳ ಭವಿಷ್ಯನಿಧಿ ತಿದ್ದುಪಡಿ ಯೋಜನೆ’ಯನ್ನು (Employee’s Pension Amendment Scheme, 2014) ಯೋಜನೆಯನ್ನು ರದ್ದುಪಡಿಸಿ 2018ರಲ್ಲಿ ಕೇರಳ ಹೈಕೋರ್ಟ್ ಆದೇಶ ನೀಡಿತ್ತು. ಇದೀಗ ಸರ್ವೋಚ್ಚ ನ್ಯಾಯಾಲಯವು ಕೇರಳ ಹೈಕೋರ್ಟ್ (Kerala High Court) ನೀಡಿರುವ ತೀರ್ಪನ್ನು ತಿರಸ್ಕೃತಗೊಳಿಸಿ ರದ್ದುಗೊಳಿಸಿದೆ. 2014ರಲ್ಲಿ ಮಾಡಲಾಗಿದ್ದ ತಿದ್ದುಪಡಿಯಲ್ಲಿ ತಿಂಗಳಿಗೆ ಗರಿಷ್ಠ 15,000 ರೂ. ವೇತನಕ್ಕೆ ಪಿಂಚಣಿ ನೀಡುವ ಬಗ್ಗೆ ಉಲ್ಲೇಖಿಸಲಾಗಿದ್ದ ವಿಚಾರವನ್ನು ತಳ್ಳಿಹಾಕಿದ್ದ ಕೇರಳ ಹೈಕೋರ್ಟ್, ಗರಿಷ್ಠ ಮಿತಿಗಿಂತಲೂ ಹೆಚ್ಚಿನ ಉದ್ಯೋಗಿಗಳು ಹೊಂದಿರುವ ವಾಸ್ತವ ವೇತನಕ್ಕನುಗುಣವಾಗಿ ಪಿಂಚಣಿ ಲೆಕ್ಕಾಚಾರ ಹಾಕುವ ಬಗ್ಗೆ ನಿರ್ದೇಶನ ನೀಡಲಾಗಿತ್ತು.

ಇದರ ಜೊತೆಗೆ ಪಿಂಚಣಿ ಯೋಜನೆಗೆ ಸೇರಲು ಯಾವುದೇ ಕಟ್-ಆಫ್ ದಿನಾಂಕ ಇರಬಾರದು ಎಂದು ಕೂಡ ಹೈಕೋರ್ಟ್ ಈ ವೇಳೆ ಹೇಳಿತ್ತು. ರಾಜಸ್ಥಾನ ಮತ್ತು ದೆಹಲಿ ಹೈಕೋರ್ಟ್​ಗಳೂ ಇಪಿಎಫ್​ಒ ತಿದ್ದುಪಡಿಯ ವಿರುದ್ಧ ತೀರ್ಪು ನೀಡಿದ್ದವು. ಈ ತೀರ್ಪನ್ನು ಈ ಹಿಂದೆ ಸುಪ್ರೀಂ ಕೋರ್ಟ್ ಕೂಡ ಎತ್ತಿಹಿಡಿದಿತ್ತು. ಆದರೆ, ಈ ತೀರ್ಪನ್ನು ಮರು ಪರಿಶೀಲನೆ ಮಾಡಲು ಇಪಿಎಫ್​ಒ ಹಾಗೂ ಕೇಂದ್ರ ಸರ್ಕಾರ ಅರ್ಜಿ ಸಲ್ಲಿಸಿದ್ದವು.

ಮರು ಪರಿಶೀಲನೆ ಅರ್ಜಿಯ ವಿಚಾರಣೆ ನಡೆಸಿದ್ದ ಸುಪ್ರೀಂ ಕೋರ್ಟ್​ ದ್ವಿಸದಸ್ಯ ನ್ಯಾಯಪೀಠ 2021ರ ಆಗಸ್ಟ್​ನಲ್ಲಿ ಅದನ್ನು ತ್ರಿಸದಸ್ಯ ಪೀಠಕ್ಕೆ ವರ್ಗಾಯಿಸಿದೆ. ಹಾಗಾಗಿ, ಸುಪ್ರೀಂ ಕೋರ್ಟ್​ನ ಮುಖ್ಯ ನ್ಯಾಯಮೂರ್ತಿ ಯು.ಯು. ಲಲಿತ್ ಹಾಗೂ ನ್ಯಾಯಮೂರ್ತಿಗಳಾದ ಅನಿರುದ್ಧ ಬೋಸ್, ಸುಧಾಂಶು ಧುಲಿಯಾ ಅವರಿದ್ದ ನ್ಯಾಯಪೀಠವು ಮರು ಪರಿಶೀಲನೆ ಅರ್ಜಿಯ ವಿಚಾರಣೆ ನಡೆಸಿದೆ.

ವಿಚಾರಣೆ ನಡೆಸಿದ ಬಳಿಕ , ಇಪಿಎಫ್​ಒ ತಿದ್ದುಪಡಿ ಬಗ್ಗೆ ಸ್ಪಷ್ಟ ಚಿತ್ರಣ ಇಲ್ಲದಿರುವುದರಿಂದ ಯೋಜನೆಗೆ ಸೇರದೇ ಇರುವ ಉದ್ಯೋಗಿಗಳಿಗೆ ಅದನ್ನು ಆಯ್ಕೆ ಮಾಡಿಕೊಳ್ಳಲು ನಾಲ್ಕು ತಿಂಗಳ ಕಾಲಾವಕಾಶ ನೀಡುವಂತೆ ನ್ಯಾಯಪೀಠ ಸೂಚಿಸಿದೆ.ವಾಸ್ತವ ವೇತನಕ್ಕೆ ಅನುಗುಣವಾಗಿ ಹೆಚ್ಚು ಪಿಂಚಣಿ ಪಡೆಯಬಹುದು ಎಂದುಕೊಂಡವರಿಗೆ ಸುಪ್ರೀಂ ಕೋರ್ಟ್ ತೀರ್ಪಿನಿಂದ ಆಸೆಯ ಮೇಲೆ ತಣ್ಣೀರು ಎರಚಿಂದಂತೆ ಆಗಿದ್ದು, 2014ರ ಇಪಿಎಫ್​ಇ ತಿದ್ದುಪಡಿ ಯೋಜನೆಯಲ್ಲಿ ಗರಿಷ್ಠ ಮಾಸಿಕ 15,000 ರೂ. ವೇತನಕ್ಕೆ ಮಿತಗೊಳಿಸಿ ಉದ್ಯೋಗಿ ದೇಣಿಗೆಯನ್ನು ಮಾತ್ರ ಲೆಕ್ಕಾಚಾರ ಹಾಕಲು ಅವಕಾಶವಿದೆ.

ಆದರೆ, ಇದನ್ನು ತಳ್ಳಿಹಾಕಿದ್ದ ಕೇರಳ ಹೈಕೋರ್ಟ್, ಎಲ್ಲ ನಿವೃತ್ತ ಉದ್ಯೋಗಿಗಳಿಗೆ ಅವರ ಪೂರ್ಣ (15,000 ರೂ. ಮೇಲ್ಪಟ್ಟು ಇದ್ದರೂ) ವೇತನದ ಆಧಾರದಲ್ಲಿ ಪಿಂಚಣಿ ನೀಡಬೇಕು ಎಂದು ತೀರ್ಪು ನೀಡಿತ್ತು. ಪೂರ್ಣ ವೇತನದ ಆಧಾರದಲ್ಲಿ ಲೆಕ್ಕಾಚಾರ ಹಾಕಿದರೆ ಸಹಜವಾಗಿಯೇ ಹೆಚ್ಚು ಪಿಂಚಣಿ ಸಿಗಲಿದೆ. ಆದರೆ, ಇದೀಗ 2014ರ ಇಪಿಎಫ್​ಇ ತಿದ್ದುಪಡಿ ಯೋಜನೆಯನ್ನು ಸುಪ್ರೀಂ ಕೋರ್ಟ್ ಎತ್ತಿಹಿಡಿದಿರುವುದರಿಂದ ಗರಿಷ್ಠ ಮಾಸಿಕ 15,000 ರೂ. ವೇತನಕ್ಕೆ ಮಿತಗೊಳಿಸಿ ಉದ್ಯೋಗಿ ದೇಣಿಗೆಯನ್ನು ಲೆಕ್ಕಾಚಾರ ಹಾಕಿ ಪಿಂಚಣಿ ನೀಡಬೇಕಾಗುತ್ತದೆ.

ಹೀಗಾಗಿ, ಹೆಚ್ಚು ಪಿಂಚಣಿ ಬಯಸಿದ್ದವರ ನಿರಾಸೆಗೆ ಕಾರಣವಾಗಿದೆ. ಭವಿಷ್ಯನಿಧಿ ವಿಚಾರದಲ್ಲಿ ವಿನಾಯಿತಿ ಪಡೆದ ಮತ್ತು ವಿನಾಯಿತಿ ಹೊಂದಿರದ ಸಂಸ್ಥೆಗಳನ್ನು ಸಮಾನವಾಗಿ ಪರಿಗಣಿಸಬೇಕು ಎಂದು ನ್ಯಾಯಾಲಯವು ಹೇಳಿದ್ದು, ಈ ಯೋಜನೆ ಅಡಿಯಲ್ಲಿ ಪ್ರಯೋಜನಗಳನ್ನು ಪಡೆಯಲು ಯಾವುದೇ ಕಟ್-ಆಫ್​ ದಿನಾಂಕ ನಿಗದಿಪಡಿಸಬಾರದು ಎಂದು 2016ರಲ್ಲಿ ನೀಡಲಾಗಿದ್ದ ತೀರ್ಪನ್ನು ಸರ್ವೋಚ್ಚ ಮತ್ತೆ ನ್ಯಾಯಾಲಯ ಎತ್ತಿಹಿಡಿದಿದೆ.

You may also like

Leave a Comment