Home » GOOD NEWS: ಅನ್ನದಾತರಿಗೆ ಭರ್ಜರಿ ಸಿಹಿ ಸುದ್ದಿ; ಜನವರಿ 31ಕ್ಕೆ ಉಚಿತ ಡೀಸೆಲ್ ನೀಡುವ ರೈತ ಶಕ್ತಿ ಯೋಜನೆಗೆ ಸಿ ಎಂ ಬಸವರಾಜ ಬೊಮ್ಮಾಯಿ ಚಾಲನೆ!!

GOOD NEWS: ಅನ್ನದಾತರಿಗೆ ಭರ್ಜರಿ ಸಿಹಿ ಸುದ್ದಿ; ಜನವರಿ 31ಕ್ಕೆ ಉಚಿತ ಡೀಸೆಲ್ ನೀಡುವ ರೈತ ಶಕ್ತಿ ಯೋಜನೆಗೆ ಸಿ ಎಂ ಬಸವರಾಜ ಬೊಮ್ಮಾಯಿ ಚಾಲನೆ!!

0 comments

ಕೃಷಿಕರಿಗೆ ಒಂದಲ್ಲಾ ಒಂದು ಸಮಸ್ಯೆ ತಲೆದೋರುತ್ತಲೇ ಇರುತ್ತದೆ. ಇತ್ತೀಚಿಗೆ ಸೂರ್ಯನ ತಾಪ ಹೆಚ್ಚುತ್ತಿದೆ. ಆದ್ದರಿಂದ ಕೃಷಿಗಳಿಗೆ ಹೆಚ್ಚಿನ ನೀರಿನ ಅವಶ್ಯಕತೆ ಇರುವ ಕಾರಣದಿಂದ ತೋಟಗಾರಿಕೆ ಇಲಾಖೆ ಕೃಷಿಕರಿಗೆ ಇಡೀ ದೇಶದಲ್ಲಿಯೇ ಪ್ರಥಮ ಬಾರಿಗೆ ರೈತರಿಗೆ ಉಚಿತ ಡೀಸೆಲ್ , ಇಂಧನ ವಿತರಿಸುವ ರೈತ ಶಕ್ತಿ ಯೋಜನೆಗೆ ಜನವರಿ 31 ರಂದು ಸಿಎಂ ಬಸವರಾಜ ಬೊಮ್ಮಾಯಿ ಚಾಲನೆ ನೀಡಲಿದ್ದಾರೆ.

ಹೌದು ರಾಜ್ಯ ಸರ್ಕಾರವು ರೈತಶಕ್ತಿ ಎಂಬ ಹೊಸ ಯೋಜನೆಯನ್ನು ಅನುಷ್ಠಾನಗೊಳಿಸಲಾಗುತ್ತಿದೆ. ಈ ಯೋಜನೆಯಡಿ ಕೃಷಿ ಉತ್ಪಾದಕತೆಯನ್ನು ಹೆಚ್ಚಿಸುವಲ್ಲಿ ರೈತರಿಗೆ ಕೃಷಿ ಯಂತ್ರೋಪಕರಣಗಳ ಬಳಕೆಯನ್ನು ಪ್ರೋತ್ಸಾಹಿಸಲು ಹಾಗೂ ಇಂಧನವೆಚ್ಚದ ಭಾರವನ್ನು ಕಡಿಮೆ ಮಾಡಲು ಪ್ರತಿ ಎಕರೆಗೆ 250/- ರೂ.ನಂತೆ ಗರಿಷ್ಟ 5 ಎಕರೆಯವರೆಗೆ 1250/- ರೂ.ಗಳನ್ನು ಡಿಬಿಟಿ ಮೂಲಕ ಡೀಸೆಲ್ ಸಬ್ಸಿಡಿ ನೀಡುವ ರೈತಶಕ್ತಿ ಯೋಜನೆ ರೂಪಿಸಲಾಗಿದೆ.

ಯೋಜನೆ ನಿಯಮ ಪ್ರಕಾರ :

  • ಒಂದು ಎಕರೆವರೆಗೆ (<= 1.00ಎಕರೆ)ರೂ.250/-,
  • ಎರಡು ಎಕರೆವರೆಗೆ (>1.00ಎಕರೆ<=2ಎಕರೆ)ರೂ.500/-,
  • ಮೂರು ಎಕರೆವರೆಗೆ(>2.00ಎಕರೆ<=3ಎಕರೆ)ರೂ.750/-,
  • ನಾಲ್ಕುಎಕರೆವರೆಗೆ(>3.00ಎಕರೆ<=4ಎಕರೆ)ರೂ.1000/-,
  • ನಾಲ್ಕು ಎಕರೆ ಮೇಲ್ಪಟ್ಟು (>4.00ಎಕರೆ ) ರೂ.1250/- ಸಹಾಯಧನ ಸಿಗಲಿದೆ. ಸದ್ಯ ಈ ಯೋಜನೆಯಡಿ ರೈತರು ಪ್ರತ್ಯೇಕವಾಗಿ ಅರ್ಜಿ ಸಲ್ಲಿಸುವ ಅವಶ್ಯಕತೆ ಇರುವುದಿಲ್ಲ. ಗರಿಷ್ಟ 5 ಎಕರೆಯವರೆಗೆ ಫ್ರೂಟ್ಸ್ ಪೋರ್ಟಲ್‍ನಲ್ಲಿ ನೋಂದಣಿ ಗುರುತಿನ (FID) ಸಂಖ್ಯೆಯಲ್ಲಿ ನಮೂದಿಸಿರುವ ಹಿಡುವಳಿಯ ಆಧಾರದ ಮೇಲೆ ರೈತರಿಗೆ ಡೀಸೆಲ್ ಸಹಾಯಧನ ವರ್ಗಾವಣೆಯಾಗಲಿದೆ.

ಸದ್ಯ ರೈತರಿಗೆ ಕೃಷಿ ಯಂತ್ರೋಪಕರಣಗಳ ಬಳಕೆಯನ್ನು ಪ್ರೋತ್ಸಾಹಿಸಲು ಹಾಗೂ ಇಂಧನವೆಚ್ಚದ ಭಾರವನ್ನು ಕಡಿಮೆ ಮಾಡಲು ಈ ಮೇಲಿನ ಯೋಜನೆ ರೂಪಿಸಲಾಗಿದೆ.

You may also like

Leave a Comment