Home » ವಾಹನ ಸವಾರರೇ ಇತ್ತ ಗಮನಿಸಿ: ಇಂದು ಮೋದಿ ಬೆಂಗಳೂರಿಗೆ ಆಗಮನ, ಹಲವು ರಸ್ತೆಗಳಲ್ಲಿ ವಾಹನ ಸಂಚಾರ ನಿರ್ಬಂಧ

ವಾಹನ ಸವಾರರೇ ಇತ್ತ ಗಮನಿಸಿ: ಇಂದು ಮೋದಿ ಬೆಂಗಳೂರಿಗೆ ಆಗಮನ, ಹಲವು ರಸ್ತೆಗಳಲ್ಲಿ ವಾಹನ ಸಂಚಾರ ನಿರ್ಬಂಧ

by Mallika
0 comments
PM Narendra Modi

PM Narendra Modi: ಕರ್ನಾಟಕದಲ್ಲಿ ವಿಧಾನಸಭೆ ಚುನಾವಣೆಯ (Karnataka Assembly Elections 2023) ಬಿಸಿ ಏರಿದೆ. ಕಾಂಗ್ರೆಸ್‌, ಬಿಜೆಪಿ, ಆಪ್‌, ಜೆಡಿಎಸ್‌ ಪಕ್ಷಗಳು ತಮ್ಮ ತಮ್ಮ ಅಭ್ಯರ್ಥಿಗಳು ಗೆಲುವು ಸಾಧಿಸಲೇ ಬೇಕೆಂಬ ಹಂಬಲದಿಂದ ಸತತ ಪ್ರಚಾರ ಕಾರ್ಯಕ್ರಮದಲ್ಲಿ ತೊಡಗಿದ್ದಾರೆ. ಅದೇ ರೀತಿ ರಾಜಕೀಯ ಧುರೀಣರು ಕೂಡಾ ಅಬ್ಬರದ ಪ್ರಚಾರ ಕಾರ್ಯಕ್ರಮದಲ್ಲಿ ನಿರತರಾಗಿದ್ದಾರೆ. ಹಾಗೆನೇ ಪ್ರಧಾನಿ ನರೇಂದ್ರ ಮೋದಿ (PM Narendra Modi) ಎಪ್ರಿಲ್‌ 29 ರಿಂದ ಪ್ರಚಾರ ಕಾರ್ಯಕ್ರಮದಲ್ಲಿ ತೊಡಗಿಕೊಂಡಿದ್ದಾರೆ. ಇಂದು ಮೇ. 05 ರಂದು ಮತ್ತೆ ತಮ್ಮ ಪ್ರಚಾರ ಕಾರ್ಯಕ್ರಮದಲ್ಲಿ ತೊಡಗಿಕೊಳ್ಳಲಿರುವುದರಿಂದ, ಇಂದು ಸಂಜೆ ಮೋದಿ ಅವರು ಬೆಂಗಳೂರಿಗೆ (Bangalore) ಗೆ ಬರಲಿದ್ದಾರೆ. ಈ ಕಾರಣದಿಂದ ಕೆಲ ರಸ್ತೆಗಳಲ್ಲಿ ವಾಹನ ಸಂಚಾರ ಬದಲಾವಣೆಯಾಗಲಿದೆ.

ಪ್ರಧಾನಿ ಮೋದಿಜೀ ಅವರು ಮೇ.7 ರಂದು ರೋಡ್‌ ಶೋ ಮಾಡಲು ಬೆಂಗಳೂರಿಗೆ ಬರಲಿದ್ದಾರೆ. ಹೀಗಾಗಿ ಇಂದು ಸಾಯಂಕಾಲದಿಂದಲೇ 5.30ರಿಂದ ರಾತ್ರಿ 7 ಗಂಟೆಯವರೆಗೆ ಈ ಕೆಳಕಂಡ ರಸ್ತೆಗಳ ಬದಲಿಗೆ ಪರ್ಯಾಯ ಮಾರ್ಗಗಳನ್ನು ಬಳಸುವಂತೆ ವಾಹನ ಸವಾರರಿಗೆ ಬೆಂಗಳೂರು ನಗರ ಸಂಚಾರಿ ಪೊಲೀಸರು ಮನವಿ ಮಾಡಿದ್ದಾರೆ.

ಹಳೆ ವಿಮಾನ ನಿಲ್ದಾಣ ರಸ್ತೆ, ಕೇಂಬ್ರಡ್ಜ್ ಲೇಔಟ್ ರಸ್ತೆ, ಇಂದಿರಾ ನಗರ 100 ಅಡಿ ರಸ್ತೆ, ಅರಳಿ ಕಟ್ಟೆ, ಎ.ಎಸ್.ಸಿ ಸೆಂಟರ್, ಟ್ರಿನಿಟಿ ವೃತ್ತ, ರಾಜಭವನ ರಸ್ತೆ​, ಎಂಜಿ ರಸ್ತೆ, ಡಿಕನ್​ಸನ್​ ರಸ್ತೆ ಮಣಿಪಾಲ್ ಸೆಂಟರ್, ಕಬ್ಬನ್ ರಸ್ತೆ, ಬಿಆರ್​ವಿ ಜಂಕ್ಷನ್, ಸಿಟಿಓ ಜಂಕ್ಷನ್, ಇನ್​ಫೆಂಟ್ರಿ ರಸ್ತೆ- ಈ ಎಲ್ಲಾ ರಸ್ತೆಗಳಲ್ಲಿ ವಾಹನ ಸಂಚಾರ ನಿರ್ಬಂಧಿಸಲಾಗಿದೆ.

You may also like

Leave a Comment