2
Udupi: ನೇಜಾರಿನಲ್ಲಿ ನಡೆದ ನಾಲ್ವರ ಕೊಲೆ ಪ್ರಕರಣಕ್ಕೆ ಕುರಿತಂತೆ ಇದೀಗ ಪೊಲೀಸ್ ಇಲಾಖೆ ತನಿಖೆ ಪೂರ್ಣಗೊಳಿಸಿದ್ದು, ಎಫ್ಎಸ್ಎಲ್ ವರದಿ ಪೊಲೀಸರ ಕೈಸೇರಿದೆ. ಹಾಗಾಗಿ ಇನ್ನೊಂದು ವಾರದೊಳಗೆ ಕೋರ್ಟ್ಗೆ ಚಾರ್ಜ್ಶೀಟ್ ಸಲ್ಲಿಕೆಯಾಗುವ ಸಂಭವವಿದೆ ಎಂದು ವರದಿಯಾಗಿದೆ.
ಇದನ್ನೂ ಓದಿ: 15 PFI ಸದಸ್ಯರಿಗೆ ಮರಣದಂಡನೆ ವಿಧಿಸಿದ ಜಡ್ಜ್ಗೆ ಕೊಲೆ ಬೆದರಿಕೆ!!
ಈ ಪ್ರಕರಣದ ಪ್ರಮುಖ ಆರೋಪಿಯಾಗಿರುವ ಪ್ರವೀಣ್ ಚೌಗುಲೆಯ ನ್ಯಾಯಾಂಗ ಬಂಧನವನ್ನು ಫೆ.8 ರವರೆಗೆ ವಿಸ್ತರಣೆ ಮಾಡಲಾಗಿದೆ.
ಫೆ.12 ಈ ಭೀಕರ ಕೊಲೆ ಪ್ರಕರಣ ನಡೆದು 90 ದಿನಗಳು ಆಗಲಿದೆ. ನ.12 ರಂದು ನಾಲ್ವರ ಕೊಲೆ ನಡೆದಿದ್ದು, ಸದ್ಯ ಚಾರ್ಜ್ಶೀಟ್ ಸಲ್ಲಿಕೆ ಪ್ರಕ್ರಿಯೆಗಳು ನಡೆಯುತ್ತಿದೆ ಎಂದು ವರದಿಯಾಗಿದೆ.
