Home » Karnataka Highcourt: ಆರ್ಥಿಕವಾಗಿ ಹಿಂದುಳಿದ ವರ್ಗದವರಿಗೆ ಶೇಕಡಾ 10ರಷ್ಟು ಮೀಸಲಾತಿ ಕೋರಿ ಪಿಐಎಲ್ : ಸರ್ಕಾರಕ್ಕೆ ಹೈಕೋರ್ಟ್ ನೋಟಿಸ್

Karnataka Highcourt: ಆರ್ಥಿಕವಾಗಿ ಹಿಂದುಳಿದ ವರ್ಗದವರಿಗೆ ಶೇಕಡಾ 10ರಷ್ಟು ಮೀಸಲಾತಿ ಕೋರಿ ಪಿಐಎಲ್ : ಸರ್ಕಾರಕ್ಕೆ ಹೈಕೋರ್ಟ್ ನೋಟಿಸ್

1 comment
Karnataka Highcourt

ಆರ್ಥಿಕವಾಗಿ ಹಿಂದುಳಿದ ವರ್ಗದವರಿಗೆ (ಇಡಬ್ಲ್ಯೂಎಸ್) ಶೇಕಡಾ 10ರಷ್ಟು ಮೀಸಲಾತಿಯನ್ನು ಒದಗಿಸುವ 103ನೇ ಸಾಂವಿಧಾನಿಕ ತಿದ್ದುಪಡಿಯನ್ನು ಜಾರಿಗೆ ತರಲು ಕೋರಿ ಸಾರ್ವಜನಿಕ ಹಿತಾಸಕ್ತಿ ಮೊಕದ್ದಮೆಯಲ್ಲಿ (ಪಿಐಎಲ್) ಕರ್ನಾಟಕ ಹೈಕೋರ್ಟ್ ಬುಧವಾರ ರಾಜ್ಯ ಸರ್ಕಾರಕ್ಕೆ ನೋಟಿಸ್ ಜಾರಿ ಮಾಡಿದೆ.

ಇದನ್ನೂ ಓದಿ: Ashwini puntih rajkumar: ಅಶ್ವಿನಿ ಪುನೀತ್ ರಾಜ್ ಕುಮಾರ್ ರಾಜಕೀಯಕ್ಕೆ ಎಂಟ್ರಿ? ಪಕ್ಷ ಯಾವುದು, ಸ್ಪರ್ಧಿಸೋ ಕ್ಷೇತ್ರ ಯಾವುದು ?

ಗಿರೀಶ್ ಭಾರದ್ವಾಜ್ ಎಂಬುವರು ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ಪಿ. ಎಸ್. ದಿನೇಶ್ ಕುಮಾರ್ ಮತ್ತು ನ್ಯಾಯಮೂರ್ತಿ ಟಿ. ಜಿ. ಶಿವಶಂಕರ ಗೌಡ ಅವರ ವಿಭಾಗೀಯ ಪೀಠವು, 2019ರಲ್ಲಿ ಸಂವಿಧಾನದ 103ನೇ ತಿದ್ದುಪಡಿಯ ಅಧಿಸೂಚನೆಯು ಶೇಕಡಾ 10ರಷ್ಟು ಇಡಬ್ಲ್ಯೂಎಸ್ ಮೀಸಲಾತಿಯನ್ನು ಒದಗಿಸಲಾಗಿತ್ತು ಮತ್ತು ಅದನ್ನು 2022ರಲ್ಲಿ ಸುಪ್ರೀಂ ಕೋರ್ಟ್ನಲ್ಲಿ ಎತ್ತಿಹಿಡಿದಿದ್ದರೂ, ಆ ಕ್ರಮಗಳನ್ನು ಜಾರಿಗೆ ತರಲು ಸರ್ಕಾರ ಇದುವರೆಗೂ ಯಾವುದೇ ಕ್ರಮಗಳನ್ನು ಕೈಗೊಂಡಿಲ್ಲ ಎಂದು ಸರ್ಕಾರ ಛಾಟಿ ಬೀಸಿದೆ.

ಸಮಾಜದಲ್ಲಿ ಆರ್ಥಿಕವಾಗಿ ದುರ್ಬಲ ವರ್ಗದ ಅಡಿಯಲ್ಲಿ ಬರುವ ವಿದ್ಯಾರ್ಥಿಗಳು ಮತ್ತು ವ್ಯಕ್ತಿಗಳ ಅನುಕೂಲಕ್ಕಾಗಿ ಆರ್ಥಿಕವಾಗಿ ದುರ್ಬಲ ವರ್ಗದ ಮೀಸಲಾತಿ ನೀತಿಯನ್ನು ಅನುಷ್ಠಾನಗೊಳಿಸುವಂತೆ ಕೋರಿ ಅರ್ಜಿದಾರರು ಕರ್ನಾಟಕ ರಾಜ್ಯದ ಮುಖ್ಯ ಕಾರ್ಯದರ್ಶಿ ಮತ್ತು ಸಮಾಜ ಕಲ್ಯಾಣ ಇಲಾಖೆಯ ಪ್ರಧಾನ ಕಾರ್ಯದರ್ಶಿಗೆ 14/01/2024 ರಂದು ಮನವಿಯನ್ನು ಸಲ್ಲಿಸಿದ್ದಾರೆ ಎಂದು ಪಿಐಎಲ್ ಹೇಳಿದೆ.

ಮುಂದಿನ ಶೈಕ್ಷಣಿಕ ವರ್ಷ ಸಮೀಪಿಸುತ್ತಿರುವ ಹಿನ್ನೆಲೆಯಲ್ಲಿ, ಇ. ಡಬ್ಲ್ಯು. ಎಸ್ ಕೋಟಾವನ್ನು ಅನುಷ್ಠಾನಗೊಳಿಸದಿರುವುದು ಬಡ ವರ್ಗಕ್ಕೆ ಶಿಕ್ಷಣ ಮತ್ತು ಸರ್ಕಾರಿ ನೇಮಕಾತಿಯಲ್ಲಿ ಪ್ರಗತಿಗಾಗಿ ತೊಂದರೆ ಉಂಟುಮಾಡುತ್ತಿದೆ ಎಂದು ಸಾರ್ವಜನಿಕ ಹಿತಾಸಕ್ತಿ ಅರ್ಜಿದಾರರ ಪರ ವಕೀಲರು ವಾದ ಮಂಡಿಸಿದರು.

You may also like

Leave a Comment