Home » Mangaluru : BJP ನಾಯಕನಿಂದ ಅಂಗವಿಕಲ ಬೀದಿ ವ್ಯಾಪಾರಿಗೆ ಹಪ್ತ ವಸೂಲಿ ಹೆಸರಲಿ ಕಿರುಕುಳ – ಡಿವೈಎಫ್‌ಐ ನಿಂದ ಖಂಡನೆ

Mangaluru : BJP ನಾಯಕನಿಂದ ಅಂಗವಿಕಲ ಬೀದಿ ವ್ಯಾಪಾರಿಗೆ ಹಪ್ತ ವಸೂಲಿ ಹೆಸರಲಿ ಕಿರುಕುಳ – ಡಿವೈಎಫ್‌ಐ ನಿಂದ ಖಂಡನೆ

1 comment

Mangaluru : ಮಂಗಳೂರಿನ ಪಡೀಲ್ ಮುಖ್ಯ ರಸ್ತೆಯ ಬಳಿ ಕಳೆದ ಹಲವು ವರುಷಗಳಿಂದ ಹೂ ಮಾರಿ ಬೀದಿ ವ್ಯಾಪಾರ ಮಾಡುವ ಮೂಲಕ ಜೀವನ ನಿರ್ವಹಿಸುತ್ತಿರುವ ಚಂದ್ರಹಾಸ್ ಪೂಜಾರಿ ಎಂಬವರಿಗೆ ಕಳೆದ ಕೆಲವು ದಿನಗಳಿಂದ ಹಫ್ತಾ ವಸೂಲಿ ಹೆಸರಲ್ಲಿ ಕಿರುಕುಳ ನಡೆಯುತ್ತಿದೆ ಎಂದು ಆರೋಪಿಸಲಾಗಿದೆ.

ಹೌದು, ಪಡೀಲ್ ಮುಖ್ಯ ರಸ್ತೆಯ ಬಳಿ ಕಳೆದ ಹಲವು ವರುಷಗಳಿಂದ ಹೂ ಮಾರಿ ಬೀದಿ ವ್ಯಾಪಾರ ಮಾಡುವ ಮೂಲಕ ಜೀವನ ನಿರ್ವಹಿಸುತ್ತಿರುವ ಚಂದ್ರಹಾಸ್ ಪೂಜಾರಿ(Chandrahas Poojary) ಎಂಬವರಿಗೆ ಕಳೆದ ಕೆಲವು ದಿನಗಳಿಂದ ಸ್ಥಳೀಯ ಮಾಜಿ ಕಾರ್ಪೊರೇಟರ್ ಬಿಜೆಪಿ ಮುಖಂಡರಾದ ವಿಜಯ ಕುಮಾರ್ ಶೆಟ್ಟಿ(BJP Leader Vijay Kumar Shetty)ಮತ್ತಾತನ ಹೆಸರಲ್ಲಿ ಹಿಂಬಾಲಕರು ಹಪ್ತ ವಸೂಲಿ ಮಾಡುತ್ತಿರುವ ಬಗ್ಗೆ ಚಂದ್ರಹಾಸ್ ಪೂಜಾರಿ ವಿಡಿಯೋ ಮೂಲಕ ಚಿತ್ರಿಸಿದ ಹೇಳಿಕೆಯ ಆರೋಪವೊಂದು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ.

ಸ್ಥಳೀಯ ಮಾಜಿ ಕಾರ್ಪೊರೇಟರ್ ಓರ್ವರ ಹೆಸರು ಇದರ ಹಿಂದೆ ಇದ್ದು ಹಫ್ತಾ ವಸೂಲಿ ಮಾಡುತ್ತಿರುವ ಬಗ್ಗೆ ಚಂದ್ರಹಾಸ್ ಪೂಜಾರಿ ವಿಡಿಯೋ ಮೂಲಕ ಚಿತ್ರಿಸಿದ ಹೇಳಿಕೆಯ ಆರೋಪವೊಂದು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ. ಇದನ್ನು ಪ್ರಶ್ನಿಸಲು ಬಂದ ಅಳಪೆ ವಾರ್ಡ್ ಮಹಿಳೆಯೋರ್ವಳು ಅಂಗವಿಕಲ ಬೀದಿ ವ್ಯಾಪಾರಿ ತರಾಟೆಗೆ ತೆಗೆದುಕೊಂಡಾಗ ಸ್ಥಳದಿಂದ ಕಾಲ್ಕಿತ್ತಿದ್ದಾರೆ. ಪ್ರಸ್ತುತ ಈ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದೆ. ಈ ಬಗ್ಗೆ ಹೆಚ್ಚಿನ ಮಾಹಿತಿಗಾಗಿ ಡಿವೈಎಫ್‌ಐ ನಿಯೋಗ ಸಂತ್ರಸ್ತ ಚಂದ್ರಹಾಸ್ ಪೂಜಾರಿಯ ಗೂಡಂಗಡಿಗೆ ಭೇಟಿ ನೀಡಿದ ಸಂದರ್ಭದಲ್ಲಿ ತಾನೆದುರಿಸುತ್ತಿರುವ ಸಮಸ್ಯೆಗಳನ್ನು ತೋಡಿಕೊಂಡಿದ್ದಾರೆ.

ಪಡೀಲ್ ಬಳಿ ಗೂಡಂಗಡಿಯಲ್ಲಿ ಹೂ ಮಾರಿಕೊಂಡು ಬೀದಿ ವ್ಯಾಪಾರ ನಡೆಸುತ್ತಿರುವ ಚಂದ್ರಹಾಸ ಪೂಜಾರಿ ಶೇಕಡಾ 75% ಅಂಗ ವೈಕಲ್ಯವನ್ನು ಹೊಂದಿರುತ್ತಾರೆ. ತನ್ನ ಎರಡೂ ಕಾಲುಗಳಲ್ಲಿ ಬಲಕಳೆದುಕೊಂಡು ನಡೆದಾಡದ ಸ್ಥಿತಿಯಲ್ಲಿರುವ ಇವರು ತನ್ನ ಸ್ವಾವಲಂಬಿ ಬದುಕಿಗಾಗಿ ಕಳೆದ ಐದಾರು ವರುಷಗಳಿಂದ ಬೀದಿ ವ್ಯಾಪಾರದಲ್ಲಿ ತೊಡಗಿಸಿಕೊಂಡು ತನ್ನ ಜೀವನ ಬದುಕನ್ನು ಸಾಗಿಸಿಕೊಂಡಿರುತ್ತಾರೆ.

ಈ ನಡುವೆ ಬಿಜೆಪಿ ನಾಯಕ ಮಾಜಿ ಕಾರ್ಪೊರೇಟರ್ ವಿಜಯ ಕುಮಾರ್ ಶೆಟ್ಟಿ ಚಂದ್ರಹಾಸ ಪೂಜಾರಿ ಅಂಗಡಿ ತೆರವಿಗೆ ಒತ್ತಡವನ್ನು ಹೇರುತ್ತಿದ್ದು ನಾನಾ ರೀತಿಯಲ್ಲಿ ಮಾನಸಿಕ ಕಿರುಕುಳ ನೀಡುತ್ತಿರುವ ಬಗ್ಗೆ ಡಿವೈಎಫ್‌ಐ ನಿಯೋಗದಲ್ಲಿ ದೂರಿದ್ದಾರೆ. ಮತ್ತು ವಿಜಯ ಕುಮಾರ್ ಶೆಟ್ಟಿ ಹೆಸರಲ್ಲಿ ಆತನ ಹಿಂಬಾಲಕರು ಹಪ್ತ ವಸೂಲಿಗೂ ಬಂದು ಕಿರುಕುಳ ನೀಡುತ್ತಿರುವ ಬಗ್ಗೆ ಮಾನಸಿಕವಾಗಿ ನೊಂದಿಕೊಂಡು ತಾನೆದುರಿಸುತ್ತಿರುವ ಸಮಸ್ಯೆಗಳನ್ನು ವಿಡಿಯೋ ಮೂಲಕ ದಾಖಲಿಸಿ ಸಾಮಾಜಿಕ ಜಾಲತಾಣಗಳಲ್ಲಿ ಹರಿಯ ಬಿಟ್ಟದ್ದಾರೆ.

ಇಷ್ಟಕ್ಕೆ ಸುಮ್ಮನಾಗದ ಬಿಜೆಪಿಯವರು ಆತನನ್ನು ಸ್ಥಳೀಯ ಠಾಣೆಗೆ ಎಳೆದು ಮಟ್ಕ ಕೇಸಿಲ್ಲಿ ಸಿಲುಕಿಸಿ ಕೇಸುದಾಖಲಿಸುವ ಮತ್ತು ಬೇರೆ ಬೇರೆ ರೀತಿಯ ಜೀವ ಬೆದರಿಕೆಯನ್ನು ಒಡ್ಡುತ್ತಿದ್ದಾರೆ. ಕಷ್ಟಪಟ್ಟು ದುಡಿದು ತಿನ್ನುವ ಅಮಾಯಕ ಬೀದಿ ವ್ಯಾಪಾರಿ ಚಂದ್ರಹಾಸ್ ಪೂಜಾರಿಯನ್ನು ವಿನಾ ಕಾರಣ ಬೆದರಿಸುತ್ತಿರುವ ಬಿಜೆಪಿ ಮುಖಂಡ ಮಾಜಿ ಕಾರ್ಪೊರೇಟರ್ ವಿಜಯ ಕುಮಾರ್ ಶೆಟ್ಟಿ ನಡೆಯನ್ನು ಡಿವೈಎಫ್‌ಐ ಖಂಡಿಸುತ್ತದೆ ಮತ್ತವರ ಮೇಲೆ ಕಠಿಣ ಕಾನೂನು ಕ್ರಮಕ್ಕೆ ಪೊಲೀಸ್ ಇಲಾಖೆಯನ್ನು ಒತ್ತಾಯಿಸುತ್ತದೆ. ಈ ತರಹದ ಕಿರುಕುಳ ಮುಂದುವರಿದರೆ ಡಿವೈಎಫ್‌ಐ ಅಂಗವಿಕಲ ಚಂದ್ರಹಾಸ ಪೂಜಾರಿ ಜೊತೆ ನಿಲ್ಲುತ್ತದೆ ಎಂದು ಡಿವೈಎಫ್‌ಐ ನಿಯೋಗ ಧೈರ್ಯ ತುಂಬಿ ಮಾತನಾಡಿಸಿದೆ.

You may also like

Leave a Comment