4
BJP: ಬಿಜೆಪಿ ಕಾರ್ಯಕರ್ತರೊಬ್ಬರು ಮನನೊಂದು ಕಚೇರಿಯಲ್ಲಿಯೇ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಬೆಂಗಳೂರಿನ ನಾಗವಾರದಲ್ಲಿ ನಡೆದಿರುವ ಕುರಿತು ವರದಿಯಾಗಿದೆ.
ಬಿಜೆಪಿ ಕಾರ್ಯಕರ್ತ ವಿನಯ್ ಸೋಮಯ್ಯ (35) ಆತ್ಮಹತ್ಯೆ ಮಾಡಿಕೊಂಡಿರುವ ವ್ಯಕ್ತಿ. ತನ್ನ ವಿರುದ್ಧ ಎಫ್ಐಆರ್ ದಾಖಲಾಗಿದಕ್ಕೆ ಮನನೊಂದು ವ್ಯಕ್ತಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ನಾಗವಾರದ ಕಚೇರಿಯಲ್ಲಿ ವಿನಯ್ ಸೋಮಯ್ಯ ನೇಣಿಗೆ ಶರಣಾಗಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಡೆತ್ನೋಟ್ ಪೋಸ್ಟ್ ಮಾಡಿದ್ದು, ರಾಜಕೀಯ ಪ್ರೇರಿತ ಎಫ್ಐಆರ್ನಿಂದ ಮನನೊಂದು ಸಾವಿಗೀಡಾಗುತ್ತಿರುವುದಾಗಿ ಬರೆದಿದ್ದಾರೆ ಎಂದು ವರದಿಯಾಗಿದೆ.
