3
Mangaluru: ತುಳು ಭಾಷೆಯನ್ನು ಕರ್ನಾಟಕದ ಅಧಿಕೃತ ಭಾಷೆಯಾಗಿ ಘೋಷಿಸಬೇಕು ಎಂದು ಆಗ್ರಹಿಸಿ 27 ದೇಶಗಳ ತುಳು ಸಂಘಟನೆಗಳ ಪ್ರತಿನಿಧಿಗಳು ಅಖಿಲ ಅಮೆರಿಕ ತುಳುವರ ಅಂಗಣ ಇದರ ಅಧ್ಯಕ್ಷೆ ಶ್ರೀವಲ್ಲಿ ರೈ ಮತ್ತು ಭಾಸ್ಕರ ಶೇರಿಗಾರ್, ಸರ್ವೋತ್ತಮ ಶೆಟ್ಟಿ ಅಬುದಾಬಿ ಅವರ ನೇತೃತ್ವದಲ್ಲಿ ಕರ್ನಾಟಕ ವಿಧಾನಸಭೆಯ ಸ್ಪೀಕರ್ ಯು.ಟಿ. ಖಾದರ್ ಅವರಲ್ಲಿ ಮನವಿ ಸಲ್ಲಿಸಲಾಯಿತು. ಮನವಿ ಸ್ವೀಕರಿಸಿದ ಖಾದರ್ ಅವರು ಬೇಡಿಕೆಗೆ ಸ್ಪಂದಿಸುವುದಾಗಿ ತಿಳಿಸಿದರು.
