6
Bengaluru: ಕೆಲಸ ಸಿಗದಿದ್ದಕ್ಕೆ ಮನನೊಂದು ಯುವಕ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಬೆಂಗಳೂರು (Bengaluru) ಉತ್ತರ ತಾಲೂಕಿನ ತೋಟದಗುಡ್ಡದಹಳ್ಳಿಯಲ್ಲಿ ನಡೆದಿದೆ.
ಆತ್ಮಹತ್ಯೆ ಮಾಡಿಕೊಂಡ ಬಿಹಾರ ಮೂಲದ ರಾಹುಲ್ ಕುಮಾರ್ ಯಾದವ್ (22) ಎಂದು ಗುರುತಿಸಲಾಗಿದೆ. ಗಾರೆ ಕೆಲಸ ಮಾಡಿಕೊಂಡು ಜೀವನ ನಡೆಸುತ್ತಿದ್ದ ರಾಹುಲ್ ಕೆಲಸ ಸಿಗದೆ ವಾಪಸ್ ಊರಿಗೆ ಹೋಗಲು ನಿರ್ಧಾರ ಮಾಡಿದ್ದ. ಇತ್ತ ಪೋಷಕರು ಊರಿಗೆ ಬರಲು ನಿರಾಕರಿಸಿದ ಹಿನ್ನೆಲೆ ಮನನೊಂದ ಯುವಕ ಬಾಡಿಗೆ ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕಕೊಂಡಿದ್ದಾನೆ. ಈ ಬಗ್ಗೆ ಮಾದನಾಯಕನಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
