Home » Sullia: 2025ನೇ ಸಾಲಿನ ವಿಎಸ್‌ಕೆ ಮಾಧ್ಯಮ ಪ್ರಶಸ್ತಿ ಪ್ರದಾನ: ಸುಳ್ಯದ ಮೂವರು ಪತ್ರಕರ್ತರಿಗೆ ಪ್ರಶಸ್ತಿ

Sullia: 2025ನೇ ಸಾಲಿನ ವಿಎಸ್‌ಕೆ ಮಾಧ್ಯಮ ಪ್ರಶಸ್ತಿ ಪ್ರದಾನ: ಸುಳ್ಯದ ಮೂವರು ಪತ್ರಕರ್ತರಿಗೆ ಪ್ರಶಸ್ತಿ

0 comments

Sullia: ರಾಜ್ಯದ ಸುದ್ದಿ ಸಂವಹನ ಸಂಸ್ಥೆ ವಿಶ್ವ ಸಂವಾದ ಕೇಂದ್ರ ಕರ್ನಾಟಕ ವರ್ಷಂಪ್ರತಿ ಕೊಡಮಾಡುವ ವಿಎಸ್‌ಕೆ ಮಾಧ್ಯಮ ಪ್ರಶಸ್ತಿ ಪ್ರದಾನ ಕಾರ್ಯಕ್ರಮ ಬಸವನಗುಡಿಯ ಬಿಎಂಎಸ್ ಇಂಜಿನಿಯರಿಂಗ್ ಕಾಲೇಜಿನಲ್ಲಿ ನಡೆಯಿತು. ಸುಳ್ಯದವರಾದ (Sullia) ಹರಿಪ್ರಸಾದ್ ಅಡ್ಡಂಗಾಯ ಹಾಗೂ ಮುಮ್ರಾಜ್ ನೇಲ್ಯಡ್ಕ ಹಾಗೂ ಮೂಲತಃ ಸುಳ್ಯದವರಾದ ರಾಧಾಕೃಷ್ಣ ಕಲ್ಚಾರ್ ಪ್ರಶಸ್ತಿ ಗೆ ಆಯ್ಕೆ ಆಗಿದ್ದಾರೆ.

ಪತ್ರಿಕೋದ್ಯಮ ಪ್ರಶಸ್ತಿ, ನ್ಯೂಸ್ 18 ಕನ್ನಡದ ಹರಿಪ್ರಸಾದ್ ಎ ಅವರಿಗೆ ಚಂದ್ರಶೇಖರ ಭಂಡಾರಿ ಪತ್ರಿಕೋದ್ಯಮ ಪ್ರಶಸ್ತಿ, ಖ್ಯಾತ ಅಂಕಣಕಾರ ರಾಧಾಕೃಷ್ಣ ಕಲ್ಟಾರ್ ಅವರಿಗೆ ಹೊ.ವೆ.ಶೇಷಾದ್ರಿ ಅಂಕಣಕಾರ ಪ್ರಶಸ್ತಿ, ಟಿವಿ ವಿಕ್ರಮದ ಮುಮ್ರಾಜ್ ಅಬ್ದುಲ್ ನೆಲ್ಯಡ್ಕ ಅವರಿಗೆ ವಿಎಸ್ ಕೆ ಡಿಜಿಟಲ್ ಮಾಧ್ಯಮ ಪ್ರಶಸ್ತಿಯನ್ನು ಪ್ರದಾನ ಮಾಡಲಾಯಿತು.

ಇದನ್ನೂ ಓದಿ:Crime: ಲಂಡನ್​ನಲ್ಲಿ ಉದ್ಯೋಗ ಕೊಡಿಸುವುದಾಗಿ ಲಕ್ಷಲಕ್ಷ ವಂಚಸಿ ಹತ್ಯೆ!

You may also like