D K Shivakumar: ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರಿಗೆ ಚುನಾವಣಾ ಆಯೋಗ ನೋಟಿಸ್ ನೀಡಿದ್ದು, ಈ ಕುರಿತು ಪ್ರತಿಕ್ರಿಯೆ ನೀಡಿರುವ ಡಿಸಿಎಂ ಡಿ.ಕೆ.ಶಿವಕುಮಾರ್ ನೋಟಿಸ್ ಕೊಡಲಿ ಬಿಡಿ, ಅಷ್ಟಕ್ಕೂ ನೋಟಿಸ್ ನೀಡಲು ಅವರು ಯಾರು? ನಾವೇ ಅವರಿಗೆ ನೋಟಿಸ್ ನೀಡಿದ್ದೇವೆ ಎಂದು ಪ್ರತಿಕ್ರಿಯೆ ನೀಡಿದ್ದಾರೆ.
ಬೆಂಗಳೂರಿನಲ್ಲಿ ಸುದ್ದಿಗಾರರ ಜೊತೆ ಮಾತನಾಡಿದ ಡಿಸಿಎಂ ಡಿ.ಕೆ.ಶಿವಕುಮಾರ್ ನಮಗೆ ನೋಟಿಸ್ ನೀಡಲು ಅಧಿಕಾರವಿದೆಯೇ ಹೊರತು ಅವರಿಗಲ್ಲ. ನಾವು ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ನ್ಯಾಯಯುತವಾಗಿ ಚುನಾವಣೆ ಗೆದ್ದಿದ್ದೇವೆ. ನ್ಯಾಯಯುತವಾಗಿ ಚುನಾವಣೆ ನಡೆಸಲು ಅವರಿಗೆ ಅವಕಾಶವಿದೆಯೇ ಹೊರತು ನೋಟಿಸ್ ನೀಡುವ ಹಕ್ಕಿಲ್ಲ. ಏನಿದ್ದರೂ ಕಾನೂನಾತ್ಮಕವಾಗಿ ಉತ್ತರ ನೀಡುತ್ತೇವೆ ಎಂದು ಹೇಳಿದ್ದಾರೆ.
Dharmasthala Case: ಧರ್ಮಸ್ಥಳ ಕೇಸ್ಗೆ ಬಿಗ್ ಟ್ವಿಸ್ಟ್: ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ ಎಂಟ್ರಿ
