Dharmasthala: ಧರ್ಮಸ್ಥಳ (Dharmasthala) ಧರ್ಮಾಧಿಕಾರಿ ವೀರೇಂದ್ರ ಹೆಗ್ಗಡೆ ಬಗ್ಗೆ ಕೋಡಿ ಮಠದ ಶ್ರೀಗಳು ಭವಿಷ್ಯ ನುಡಿದ್ದಾರೆ. ನಿನಗಾಗಿ ಪಶ್ಚಿಮದಲ್ಲಿ ಸೂರ್ಯ ಮೂಡ ಲಿದ್ದಾನಾ? ಶಕ್ತಿ ಇದ್ದರೆ ಗೆಲ್ಲು, ಇಲ್ಲದಿದ್ದರೆ ಒದಿಸಿಕೋ ಅಂತಾ ಮಾರ್ಮಿಕ ಮಾತುಗಳನ್ನಾಡಿದ್ದಾರೆ.
ಪ್ರತಿ ಬಾರಿಯೂ ರಾಜಕೀಯ, ಪ್ರಕೃತಿ ವಿಕೋಪಗಳ ಬಗ್ಗೆ ಹೇಳ್ತಿದ್ದ ಕೋಡಿ ಮಠದ ಶ್ರೀಗಳು, ಈ ಹಿಂದೆ ಧರ್ಮಸ್ಥಳದ ಬಗ್ಗೆಯೂ ಭವಿಷ್ಯ ನುಡಿದಿದ್ರು.
ಪ್ರಚಾರ, ವಿಚಾರ, ಸಮಾಚಾರ, ಅಪಪ್ರಚಾರ ಹೀಗೆ ಬರಬೇಕಾಗಿತ್ತು. ಆದರೆ, ಅಪಪ್ರಚಾರ ಮೊದಲೇ ಬಂದಿದೆ ಅಂತಾ ಹೇಳಿದ್ರು. ಈಗ ವೀರೇಂದ್ರ ಹೆಗ್ಗಡೆಯವರಿಗೆ ಅನ್ವಯಿಸುವಂತೆ ಭವಿಷ್ಯ ನುಡಿದಿದ್ದಾರೆ.
ಇದನ್ನೂ ಓದಿ:Cancer vaccine: ಕ್ಯಾನ್ಸರ್ ಗುಣಪಡಿಸುವ ಲಸಿಕೆ! ಬಳಕೆ ಯಾವಾಗ?
ಬೆಳಕು ಬಂದ ಮೇಲೆ ಕತ್ತಲು ಹೋಗುತ್ತದೆ ಇದು ವಿಧಿ ನಿಯಮ. ಇದನ್ನು ಯಾರಿಂದಲೂ ತಪ್ಪಿಸಲು ಸಾಧ್ಯವಿಲ್ಲ. ಒಳ್ಳೊಳ್ಳೆ ಗುಡಿಗಳ ಪೂಜೆಗಳು ನಿಲ್ಲುತ್ತಾ ಬರುತ್ತವೆ ಎಂದು ಕಾಲಜ್ಞಾನದಲ್ಲಿ ಹೇಳಲಾಗಿದೆ. ಎಲ್ಲಿ ನಿಧಿಯಿರುತ್ತೋ ಅಲ್ಲಿ ವಿಧಿಯಾಟವೂ ಜೋರಾಗಿ ಇರುತ್ತದೆ ಅಂತಾ, ಹೇಳಿದ್ದಾರೆ.
