4
Belthangady: ಸಾಮಾಜಿಕ ಹೋರಾಟಗಾರ ಸ್ನೇಹಮಯಿ ಕೃಷ್ಣ ವಿರುದ್ಧ ವೆಂಕಪ್ಪ ಕೋಟ್ಯಾನ್ ಎನ್ನುವವರು ದೂರನ್ನು ನೀಡಿದ್ದಾರೆ.
ಸೌಜನ್ಯಾಳನ್ನು ಆಕೆಯ ಮಾವ ವಿಠಲ್ ಗೌಡ ಕೊಂದಿರುವುದಗಿ ಸ್ನೇಹಮಯಿ ಕೃಷ್ಣ ಹೇಳಿಕೆಯನ್ನು ನೀಡಿದ್ದರು. ಇದರ ಕುರಿತು ಬೆಳ್ತಂಗಡಿ ಪೊಲೀಸ್ ಠಾಣೆಗೆ ದೂರನ್ನು ನೀಡಿದ್ದರು.
ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ಪೊಲೀಸ್ ಠಾಣೆಗೆ ವೆಂಕಪ್ಪ ಕೋಟ್ಯಾನ್ ದೂರನ್ನು ನೀಡಿದ್ದು, ಸೌಜನ್ಯಾಳಿಗೆ ನ್ಯಾಯ ಒದಗಿಸುವ ಹೋರಾಟದ ದಾರಿಯನ್ನು ತಪ್ಪಿಸಲು ಸ್ನೇಹಮಯಿ ಕೃಷ್ಣ ದುರುದ್ದೇಶ ಹೊಂದಿದ್ದರೆ ಎಂದು ಆರೋಪಿಸಲಾಗಿದೆ.
ಈ ರೀತಿಯ ಹೇಳಿಕೆಯ ಹಿಂದೆ ಯಾರಿದ್ದರೆ ಎನ್ನುವ ಕುರಿತು ತನಿಖೆಯಾಗಬೇಕು. ಸ್ನೇಹಮಯಿ ಕೃಷ್ಣ ಅವರ ವಿಚಾರಣೆ ನಡೆಯಬೇಕೆಂದು ಒತ್ತಾಯ ಮಾಡಲಾಗಿದೆ.
