10
Actor Vijayan: ತಮಿಳುನಾಡಿನ ಕರೂರ್ ಜಿಲ್ಲೆಯಲ್ಲಿ ಶನಿವಾರ ರಾತ್ರಿ ತಮಿಳಗ ವೆಟ್ರಿ ಕಳಗಂ ಮುಖ್ಯಸ್ಥ ವಿಜಯ್ ಅವರ ರ್ಯಾಲಿಯಲ್ಲಿ ನಡೆದ ಕಾಲ್ತುಳಿದಲ್ಲಿ ಸಾವು ಉಂಟಾಗಿದ್ದು, ಈ ಘಟನೆಗೆ ಸಂಬಂಧಪಟ್ಟಂತೆ ಇದೀಗ ಮೊದಲ ಬಂಧನವಾಗಿದೆ. ಟಿವಿಕೆ ಪಕ್ಷದ ಮುಖಂಡ ಹಾಗೂ ಕಾರ್ಯದರ್ಶಿ ಮದಿಯಳಗನ್ ಅವರನ್ನು ಬಂಧನ ಮಾಡಲಾಗಿದೆ. ಅವರ ವಿರುದ್ಧ ಎಫ್ಐಆರ್ ದಾಖಲು ಮಾಡಲಾಗಿದ್ದು, ಮದಿಯೊಳಗನೆ ಅವರನ್ನು ಬಂಧನ ಮಾಡಲಾಗಿದೆ.
ಕರೂರ್ ಕಾಲ್ತುಳಿತ ದುರಂತದ ಕುರಿತು ಮುಖ್ಯಮಂತ್ರಿ ಎಂ.ಕೆ.ಸ್ಟಾಲಿನ್ ಉನ್ನತ ಮಟ್ಟದ ನ್ಯಾಯಾಂಗ ತನಿಖೆಗೆ ಆದೇಶ ನೀಡಿದ್ದಾರೆ. ಕರೂರ್, ಎಸ್ಪಿ, ಡಿಎಸ್ಪಿ, ಪೊಲೀಸ್ ಇನ್ಸ್ಪೆಕ್ಟರ್ ತಲೆದಂಡವಾಗುವ ಸಾಧ್ಯತೆ ಇದೆ.
