

ಚಾರ್ಮಾಡಿ: ಘಾಟ್ನಲ್ಲಿ ಚಾಲಕನ ನಿಯಂತ್ರಣ ತಪ್ಪಿ 8 ನೇ ತಿರುವಿನಲ್ಲಿ ಲಾರಿ ಪಲ್ಟಿಯಾದ ಘಟನೆ ಜ.24 ರ ಮುಂಜಾನೆ ನಡೆದಿದೆ.
ಮರದ ಹುಡಿಯನ್ನು ಲಾರಿಯೊಂದು ಚಿಕ್ಕಮಗಳೂರಿನಿಂದ ಮಂಗಳೂರು ಕಡೆಗೆ ಹೋಗುತ್ತಿದ್ದ ಸಂದರ್ಭದಲ್ಲಿ ಈ ಅವಘಡ ಸಂಭವಿಸಿದೆ. ಅದೃಷ್ಟವಶಾತ್ ಯಾವುದೇ ಪ್ರಾಣ ಹಾನಿ ಉಂಟಾಗಿಲ್ಲ. ಲಾರಿ ತೆರವು ಕಾರ್ಯ ಪ್ರಾರಂಭವಾಗಿದ್ದು, ಟ್ರಾಫಿಕ್ ಜಾಮ್ ಉಂಟಾಗಿದೆ.













