3
ಆಸ್ತಿಗಾಗಿ ಮಗನನ್ನು ಕೊಲೆ ಮಾಡಿದ್ದ ತಂದೆ ಜೈಲಿನಲ್ಲಿ ಮೃತಪಟ್ಟಿರುವ ಘಟನೆ ರಾಯಚೂರಿನಲ್ಲಿ ನಡೆದಿದೆ.
ಹನುಮಂತ (70) ಮೃತಪಟ್ಟ ವ್ಯಕ್ತಿ ಎಂದು ಗುರುತಿಸಲಾಗಿದೆ.
ಈತ ಜುಲೈ 28 ರಂದು ತುರ್ವೀಹಾಳದ ಮಲ್ಲದಗುಡ್ಡ ಗ್ರಾಮದಲ್ಲಿ ತನ್ನ ಸ್ವಂತ ಮಗನನ್ನೇ ಕಾಲುವೆಗೆ ನೂಕಿ ಕೊಲೆ ಮಾಡಿದ್ದ. ಈ ಕೃತ್ಯಕ್ಕೆ 18 ವರ್ಷ ಮಗ ಭೀಮಣ್ಣ ಕೊಲೆಯಾಗಿದ್ದ. ಹಾಗಾಗಿ ಈತನಿಗೆ ಜೈಲು ಶಿಕ್ಷೆಯಾಗಿತ್ತು.
ಜುಲೈ 29ರಂದು ಪೊಲೀಸರು ಇವನನ್ನು ವಶಕ್ಕೆ ಪಡೆದಿದ್ದರು. ಲಿಂಗಸಗೂರು ಜೈಲಿನಲ್ಲಿ ಬಂಧಿಯಾಗಿ ಇಟ್ಟಿದ್ದರು. ಆದರೆ ಜೈಲಿನಲ್ಲಿದ್ದ ಈತ ಏಕಾಏಕಿ ಮೃತಪಟ್ಟಿದ್ದಾನೆ. ಈ ಸಾವು ಹೇಗಾಯಿತು ಎಂದು ಇದುವರೆಗೆ ತಿಳಿದಿಲ್ಲ.
ಸದ್ಯ ರಾಯಚೂರಿನ ರಿಮ್ಸ್ ಶವಾಗಾರದಲ್ಲಿ ಆರೋಪಿ ಮೃತ ದೇಹ ಇಡಲಾಗಿದೆ. ಮ್ಯಾಜಿಸ್ಟ್ರೇಟ್ ಮುಂದೆಯೇ ಮರಣೋತ್ತರ ಪರೀಕ್ಷೆ ನಡೆಯಲಿದ್ದು, ನಂತರ ಸಾವಿನ ಕಾರಣ ತಿಳಿಯಲಿದೆ.
