Home » ಪಡುಬಿದ್ರಿ | ಕೆಎಸ್‌ಆರ್‌ಟಿಸಿ ಬಸ್ ಡಿಕ್ಕಿ ಹೊಡೆದು ಪಾದಚಾರಿ ಸಾವು

ಪಡುಬಿದ್ರಿ | ಕೆಎಸ್‌ಆರ್‌ಟಿಸಿ ಬಸ್ ಡಿಕ್ಕಿ ಹೊಡೆದು ಪಾದಚಾರಿ ಸಾವು

0 comments

ರಸ್ತೆ ದಾಟುತ್ತಿದ್ದಾಗ ಕೆಎಸ್‌ಆರ್‌ಟಿಸಿ ಬಸ್ ಡಿಕ್ಕಿಯಾಗಿ ಪಾದಚಾರಿ ಸಾವನ್ನಪ್ಪಿದ ಘಟನೆ ಬುಧವಾರ ರಾತ್ರಿ ಪಡುಬಿದ್ರಿಯಲ್ಲಿ ನಡೆದಿದೆ.

ಮೃತರನ್ನು ಪಡುಬಿದ್ರಿ ಬೆಂಗ್ರೆ ನಿವಾಸಿ ಆನಂದ ದೇವಾಡಿಗ (62) ಎಂದು ಗುರುತಿಸಲಾಗಿದೆ.

ಆನಂದ ದೇವಾಡಿಗ ಅವರು ಬುಧವಾರ ರಾತ್ರಿ ಪಡುಬಿದ್ರಿ ಪೇಟೆಯಲ್ಲಿ ರಸ್ತೆ ದಾಟುತ್ತಿದ್ದಾಗ ಮಂಗಳೂರು ಕಡೆ ಹೋಗುತ್ತಿದ್ದ ಕೆಎಸ್‌ಆರ್‌ಟಿಸಿ ಬಸ್ ಡಿಕ್ಕಿಯಾಗಿ ಅಪಘಾತ ಸಂಭವಿಸಿದೆ.ಕೂಲಿ ಕಾರ್ಮಿಕರಾಗಿದ್ದ ಆನಂದ ದೇವಾಡಿಗ ಅವರು ಅವಿವಾಹಿತಾಗಿದ್ದರು.

ಪಡುಬಿದ್ರಿ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

You may also like

Leave a Comment