Home » ಬೆಳ್ತಂಗಡಿ| ಕೆಲಸಕ್ಕೆಂದು ಹೋದ ಮಹಿಳೆ ನಾಪತ್ತೆ | ಮಗುವನ್ನು ಅತ್ತೆ ಮನೆಯಲ್ಲಿ ಬಿಟ್ಟು ನಾಪತ್ತೆಯಾದ ಗೃಹಿಣಿ

ಬೆಳ್ತಂಗಡಿ| ಕೆಲಸಕ್ಕೆಂದು ಹೋದ ಮಹಿಳೆ ನಾಪತ್ತೆ | ಮಗುವನ್ನು ಅತ್ತೆ ಮನೆಯಲ್ಲಿ ಬಿಟ್ಟು ನಾಪತ್ತೆಯಾದ ಗೃಹಿಣಿ

by Praveen Chennavara
0 comments

ಬೆಳ್ತಂಗಡಿ: ಗೃಹಿಣಿಯೊಬ್ಬಳು ಕೆಲಸಕ್ಕೆಂದು ಮನೆ ಬಿಟ್ಟು ಹೋಗಿದ್ದು ನಂತರ ಮನೆಗೆ ವಾಪಸ್ಸಾಗದೇ ನಾಪತ್ತೆಯಾಗಿರುವ ಘಟನೆ ಬೆಳ್ತಂಗಡಿ ತಾಲೂಕಿನ ಮುಂಡೂರು ಗ್ರಾಮದಲ್ಲಿ ನಡೆದಿದೆ.

ನಾಪತ್ತೆಯಾದ ಮಹಿಳೆಯನ್ನು ಶಿಲ್ಪ ಎಂದು ಗುರುತಿಸಲಾಗಿದೆ. ಮಗುವನ್ನು ಅತ್ತೆಯ ಮನೆಯಲ್ಲೇ ಬಿಟ್ಟು ಅಕ್ಟೋಬರ್ 20 ರಂದು ಕೆಲಸಕ್ಕೆಂದು ಹೋದಾಕೆ ಮತ್ತೆ ಮನೆಗೆ ವಾಪಾಸ್ಸಾಗಲಿಲ್ಲ.

ಊರಿನಲ್ಲಿರುವ ವಿವಿಧ ಸಂಘಗಳಲ್ಲಿ ಸಾಲ ಮಾಡಿರುವ ಈಕೆ ಫೇಸ್ ಬುಕ್ ನಲ್ಲಿ ಸಕ್ರೀಯವಾಗಿದ್ದಳು ಎಂದು ಹೇಳಲಾಗಿದೆ. ಮನೆ ಬಿಟ್ಟು ಹೋದ ದಿನ ಪಕ್ಕದ ಮನೆಯವರಿಂದ ಮದುವೆಗೆ ಹೋಗುತ್ತಿದ್ದೆನೆಂದು ಸುಳ್ಳು ಹೇಳಿ ಅವರಿಂದ 3 ಪವನ್ ಕರಿಮಣಿ ಸರವನ್ನು ಪುಸುಲಾಯಿಸಿ ತೆಗೆದುಕೊಂಡು ಹೋಗಿದ್ದಾಳೆ.

ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಈ ಕುರಿತು ಪ್ರಕರಣ ದಾಖಲಾಗಿದೆ.

ಗಡಿಪಿಲ : ರಿಕ್ಷಾ ಚಾಲಕ ಚೇತನ್‌ಗೆ ಹಲ್ಲೆ ,ಹ್ಯಾರಿಸ್ ಮತ್ತು ತಂಡದಿಂದ ಕೃತ್ಯ ಶಂಕೆ

You may also like

Leave a Comment