Home » ಕಲ್ಲಿದ್ದಲು ಗಣಿಯ ಮೇಲ್ಛಾವಣಿ ಕುಸಿದು ನಾಲ್ವರು ಕಾರ್ಮಿಕರು ಸ್ಥಳದಲ್ಲೇ ಸಾವು

ಕಲ್ಲಿದ್ದಲು ಗಣಿಯ ಮೇಲ್ಛಾವಣಿ ಕುಸಿದು ನಾಲ್ವರು ಕಾರ್ಮಿಕರು ಸ್ಥಳದಲ್ಲೇ ಸಾವು

by ಹೊಸಕನ್ನಡ
0 comments

ಕಲ್ಲಿದ್ದಲು ಗಣಿ ಯೋಜನೆಯ ಮೇಲ್ಛಾವಣಿ ಕುಸಿದು ನಾಲ್ವರು ಕಾರ್ಮಿಕರು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ತೆಲಂಗಾಣದ ಮಂಚೇರಿಯಲ್ ಜಿಲ್ಲೆಯಲ್ಲಿ ನಡೆದಿದೆ.

ಶ್ರೀರಾಂಪುರ ಪ್ರದೇಶದಲ್ಲಿರುವ ಸಿಂಗರೇನಿ ಕಲಿಯೇರೀಸ್ ಕಂಪನಿ ಲಿಮಿಟೆಡ್ (ಎಸ್‍ಸಿಸಿಎಲ್) ನಲ್ಲಿ ಮೇಲ್ಛಾವಣಿ ಹೊದಿಸುತ್ತಿರುವ ವೇಳೆ ಈ ಘಟನೆ ಸಂಭವಿಸಿದೆ. ಮೇಲ್ಛಾವಣಿಯ ಒಂದು ಭಾಗ ನಾಲ್ವರು ಕಾರ್ಮಿಕರ ಮೇಲೆ ಬಿದ್ದಿದ್ದು, ಅವರು ಅವಶೇಷಗಳಡಿಯಲ್ಲಿ ಸಿಲುಕಿ ಸಾವನ್ನಪ್ಪಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರ

ಈ ಕುರಿತಂತೆ ಎಸ್‍ಸಿಸಿಎಲ್‍ನ ಅಧ್ಯಕ್ಷ ಮತ್ತು ವ್ಯವಸ್ಥಾಪಕ ನಿರ್ದೇಶಕ ಎನ್.ಶ್ರೀಧರ್ ಅವರು, ಮೃತರ ಕುಟುಂಬಸ್ಥರಿಗೆ ಸಂತಾಪ ಸೂಚಿಸಿದ್ದು, ಘಟನೆಯ ಕುರಿತು ತನಿಖೆ ನಡೆಸಿ ವರದಿ ಸಲ್ಲಿಸುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ತಿಳಿಸಿದ್ದಾರೆ. ಇಂತಹ ಘಟನೆಗಳು ಮರುಕಳಿಸದಂತೆ ನೋಡಿಕೊಳ್ಳಬೇಕು ಸೂಚನೆ ನೀಡಿದ್ದಾರೆ.

ಈ ಸಂಬಂಧ ಉನ್ನತ ಅಧಿಕಾರಿಗಳು ಸಂತ್ರಸ್ತರ ಕುಟುಂಬದ ಒಬ್ಬ ಅರ್ಹ ಸದಸ್ಯರಿಗೆ ಉದ್ಯೋಗ ನೀಡುವುದಾಗಿ ತಿಳಿಸಿದ್ದಾರೆ. ಜೊತೆಗೆ 70 ಲಕ್ಷದಿಂದ 1 ಕೋಟಿ ನಡುವೆ ಪರಿಹಾರ ಘೋಷಿಸಿದ್ದಾರೆ ಎಂದು ತಿಳಿದುಬಂದಿದೆ.

You may also like

Leave a Comment