Home » ಹಾಲಿನ ವ್ಯಾನ್ ಡಿಕ್ಕಿ ಹೊಡೆದು ದ್ವಿಚಕ್ರ ವಾಹನ ಸವಾರ ಸ್ಥಳದಲ್ಲೇ ಸಾವು

ಹಾಲಿನ ವ್ಯಾನ್ ಡಿಕ್ಕಿ ಹೊಡೆದು ದ್ವಿಚಕ್ರ ವಾಹನ ಸವಾರ ಸ್ಥಳದಲ್ಲೇ ಸಾವು

0 comments

ಹಾಲಿನ ವ್ಯಾನ್ ಡಿಕ್ಕಿ ಹೊಡೆದ ಪರಿಣಾಮ ದ್ವಿಚಕ್ರ ವಾಹನ ಸವಾರ ಮೃತಪಟ್ಟ ಘಟನೆ ಉಡುಪಿಯ ಹಿರಿಯಡ್ಕದ ಗುಡ್ಡೆ ಅಂಗಡಿ ಬಳಿ ಇಂದು ಬೆಳಗ್ಗೆ ನಡೆದಿದೆ.

ಮೃತ ವ್ಯಕ್ತಿಯನ್ನು ಮಣಿಪಾಲ ಮುದ್ರಣಾಲಯದಲ್ಲಿ ಕೆಲಸ ಮಾಡುತ್ತಿರುವ ಚಿಕ್ಕಲಬೆಟ್ಟು ಬೈಲೂರು ನಿವಾಸಿ ವಿಫೇಶ್ ಪೂಜಾರಿ ಎಂದು ಗುರುತಿಸಲಾಗಿದೆ.

ರಾತ್ರಿ ಪಾಳಿಯ ಕರ್ತವ್ಯ ಮುಗಿಸಿ ಮಣಿಪಾಲದಿಂದ ಬೈಲೂರಿಗೆ ಬರುತ್ತಿದ್ದಾಗ ಈ ಅವಘಡ ಸಂಭವಿಸಿದೆ. ಡಿಕ್ಕಿಯ ಪರಿಣಾಮವಾಗಿ ವಾಹನ ಸವಾರ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಹಾಲಿನ ವ್ಯಾನ್ ಬಜಗೋಳಿಯಿಂದ ಉಡುಪಿಗೆ ತೆರಳುತ್ತಿತ್ತು ಎಂದು ತಿಳಿದುಬಂದಿದೆ.

ಹಿರಿಯಡ್ಕ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

You may also like

Leave a Comment