Home » Actor Darshan: ಡಿ ಜಾಮೀನು; ರೇಣುಕಾಸ್ವಾಮಿ ಕುಟುಂಬದವರು ಮೊದಲ ಪ್ರತಿಕ್ರಿಯೆ ಇಲ್ಲಿದೆ

Actor Darshan: ಡಿ ಜಾಮೀನು; ರೇಣುಕಾಸ್ವಾಮಿ ಕುಟುಂಬದವರು ಮೊದಲ ಪ್ರತಿಕ್ರಿಯೆ ಇಲ್ಲಿದೆ

0 comments
Renukaswamy Photo

Actor Darshan: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ 131 ದಿನಗಳ ಕಾಲ ಜೈಲಿನಲ್ಲಿದ್ದ ನಟ ದರ್ಶನ್‌ಗೆ ಮಧ್ಯಂತರ ಬೇಲ್‌ ದೊರಕಿದೆ. ಈ ವಿಷಯಕ್ಕೆ ಸಂಬಂಧಪಟ್ಟಂತೆ ರೇಣುಕಾಸ್ವಾಮಿ ಕುಟುಂಬದವರು ಟಿವಿ9 ಗೆ ಪ್ರತಿಕ್ರಿಯೆ ನೀಡಿದ್ದಾರೆ.

ಈ ಬಗ್ಗೆ ಸುದ್ದಿಗೋಷ್ಠಿ ನಡೆಸುತ್ತೇವೆ. ಕೋರ್ಟ್‌ ನೀಡಿರವ ತೀರ್ಪಿಗೆ ತಲೆ ಬಾಗುತ್ತೇವೆ. ಹಾಗೆನೇ ದರ್ಶನ್‌ ವಿರುದ್ಧ ಹೋರಾಟ ಮುಂದುವರಿಯುತ್ತದೆ. ಹರಿಹರಕ್ಕೆ ಹೋಗಿ ಈ ಕುರಿತು ಸುದ್ದಿಗೋಷ್ಠಿ ಮಾಡಿ ಈ ಕುರಿತು ಮಾಹಿತಿ ನೀಡುತ್ತೇವೆ ಎಂದು ರೇಣುಕಾಸ್ವಾಮಿ ಕುಟುಂಬದವರು ಹೇಳಿದ್ದಾರೆ.

ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಬಳ್ಳಾರಿ ಜೈಲಿನಲ್ಲಿರುವ ದರ್ಶನ್‌ಗೆ ಆರು ವಾರಗಳ ಕಾಲ ಮಧ್ಯಂತರ ಜಾಮೀನು ನೀಡಿ ಆದೇಶ ಹೊರಡಿಸಿದೆ. ಹಾಗೆನೇ ಒಂದು ವಾರದಲ್ಲಿ ವೈದ್ಯಕೀಯ ವರದಿಯನ್ನು ಕೂಡಾ ಕೋರ್ಟ್‌ಗೆ ನೀಡಲು ಕೋರ್ಟ್‌ ಆದೇಶ ನೀಡಿದೆ. ಹೆಲ್ತ್‌ಗ್ರೌಂಡ್ಸ್‌ ಮೇಲೆ ಈ ಜಾಮೀನು ಮಂಜೂರು ಮಾಡಿದೆ. 131 ದಿನಗಳಿಂದ ಜೈಲು ವಾಸ ಅನುಭವಿಸಿದ್ದ ದರ್ಶನ್‌ಗೆ ಈಗ ಜೈಲಿನಿಂದ ಬಿಡುಗಡೆಯಾಗಿದ್ದಾರೆ.

ಕೋರ್ಟ್‌ ಕಂಡೀಷನ್ಸ್‌: ಚಿಕಿತ್ಸೆ ಕುರಿತ ಕಂಪ್ಲೀಟ್‌ ಮಾಹಿತಿಯನ್ನು ಕೋರ್ಟ್‌ಗೆ ನೀಡಬೇಕು.
ಪಾಸ್‌ಪೋರ್ಟ್‌ ನ್ನು ಕೋರ್ಟ್‌ಗೆ ಸರೆಂಡರ್‌ ಮಾಡಬೇಕು. ಎಲ್ಲೂ ವಿದೇಶಕ್ಕೆ ಹೋಗೋ ಹಾಗಿಲ್ಲ
ಬೇರೆ ಯಾವುದೇ ಚಟುವಟಿಕೆಯಲ್ಲಿ ಪಾಲ್ಗೊಳ್ಳುವಂತಿಲ್ಲ, ಅಂದರೆ ಶೂಟಿಂಗ್‌ಗೆ ಹೋಗುವಂತಿಲ್ಲ.
ಆರೋಪಿ ದರ್ಶನ್‌ ಇಚ್ಛಿಸಿದ ಆಸ್ಪತ್ರೆಗೆ ದಾಖಲಾಗಬಹುದು ಎಂದು ಹೈಕೋರ್ಟ್‌ ಹೇಳಿದೆ. 2.2 ಲಕ್ಷ ರೂಪಾಯಿ ಬಾಂಡ್‌, ಇಬ್ಬರ ಶ್ಯೂರಿಟಿ, ಸಾಕ್ಷಿ ಮೇಲೆ ಪ್ರತ್ಯಕ್ಷ ಅಥವಾ ಪರೋಕ್ಷ ಬೆದರಿಕೆ ಹಾಕಬಾರದು, ಸಾಕ್ಷಿ ನಾಶಕ್ಕೆ ಪ್ರಯತ್ನ ಪಡಬಾರದು, ಸಾಕ್ಷಿಗಳ ಸಂಪರ್ಕ ಮಾಡಬಾರದು,ಜಾಮೀನಿನ ದುರಪಯೋಗ ಮಾಡಿಕೊಳ್ಳಬಾರದು.

banner

You may also like

Leave a Comment