2
Bantwala: ಕರಿಯಂಗಳ ಗ್ರಾಮದ ಪಲ್ಲಿಪಾಡಿಯಲ್ಲಿ ಬಸ್ ತಿರುಗಿಸುವ ವಿಚಾರದಲ್ಲಿ ಖಾಸಗಿ ಬಸ್ನ್ನು ತಡೆದ ತಂಡವೊಂದು ಚಾಲಕ-ನಿರ್ವಾಹಕರಿಗೆ ಅವಾಚ್ಯ ಶಬ್ದಗಳಿಂದ ನಿಂದನೆ ಮಾಡಿ, ಜೀವ ಬೆದರಿಕೆ ಹಾಕಿ ಓಡಿದ ಘಟನೆ ಎ.21 ರಂದು ನಡೆದಿದೆ.
ರಾತ್ರಿ 7.40 ರ ಸುಮಾರಿಗೆ ಬಸ್ ಪೊಳಲಿ-ಕೊಳತ್ತಮಜಲು ಮಾರ್ಗವಾಗಿ ಸಂಚರಿಸುವ ಸಂದರ್ಭದಲ್ಲಿ ಬಸ್ ತಿರುಗಿಸುವ ವಿಚಾರದಲ್ಲಿ ಆರೋಪಿಗಳಾದ ಉಮೇಶ ಶೆಟ್ಟಿ, ವಿಜಯ, ಕಿಶೋರ, ಪ್ರಶಾಂತ್ ಹಾಗೂ ಇತರರು ತಕರಾರು ತೆಗೆದಿದ್ದಾರೆ.
ಬಸ್ನ ನಿರ್ವಾಹಕ ಅಭಿಜಿತ್ ಶೆಟ್ಟಿ ದೂರು ನೀಡಿದ್ದು, ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
