2
Mangalore: ನಗರದ ಬಜ್ಪೆ ಕಿನ್ನಿಪದವು ಬಳಿ ಹಂತಕರು ನಿನ್ನೆ ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿಯನ್ನು ಬರ್ಬರ ಹತ್ಯೆ ಮಾಡಿದ್ದು, ಪ್ರವೀಣ್ ನೆಟ್ಟಾರು ಹತ್ಯೆಗೆ ಪ್ರತೀಕಾರವಾಗಿ ಸುರತ್ಕಲ್ನ ಫಾಜಿಲ್ ಎಂಬಾತನ ಹತ್ಯೆ ನಡೆದಿತ್ತು. ಇದೇ ಸೇಡಿಗೆ ಇದೀಗ ಸುಹಾಸ್ ಶೆಟ್ಟಿ ಹತ್ಯೆ ನಡೆದಿದೆ ಎನ್ನಲಾಗುತ್ತಿದೆ.
ಇದೀಗ ಸುಹಾಸ್ ಹತ್ಯೆ ಬೆನ್ನಲ್ಲೇ ʼಫಿನೀಶ್ʼ ಎಂದು ಸೋಶಿಯಲ್ ಮೀಡಿಯಾದಲ್ಲಿ ಪೋಸ್ಟ್ ವೈರಲ್ ಆಗಿದ್ದು, ಸಾಕಷ್ಟು ಚರ್ಚೆಗೆ ಗ್ರಾಸವಾಗಿದೆ.
ಸುಹಾಸ್ ಹತ್ಯೆಯಾದ ಕೆಲವೇ ನಿಮಿಷಗಳಲ್ಲಿ Troll_mayadiaka ಹೆಸರಿನ ಇನ್ಸ್ಟಾಗ್ರಾಂ ಪೇಜ್ನಲ್ಲಿ “ಫಿನೀಶ್ʼ ಅಂತ ಪೋಸ್ಟ್ ಬಹಿರಂಗವಾಗಿತ್ತು. ಹತ್ಯೆ ಬೆನ್ನಲ್ಲೆ ವಿಡಿಯೋ ಹಂಚಿಕೊಳ್ಳುವ ಮೂಲಕ ಸಂಭ್ರಮಿಸಲಾಗಿದೆ. ಜೊತೆಗೆ ‘waiting for next wicket’ ಅಂತ ಪೋಸ್ಟ್ ಮಾಡಲಾಗಿದೆ.
