Home » BREAKING NEWS : ಮಹಾರಾಷ್ಟ್ರ 5 ಲಾರಿಗಳ ಮೇಲೆ ಕರಾವೇ ಕಾರ್ಯಕರ್ತರಿಂದ ಕಲ್ಲು ತೂರಾಟ |ಮುಂಭಾಗದ ಗ್ಲಾಸ್‌ ಪೀಸ್‌ ಪೀಸ್‌

BREAKING NEWS : ಮಹಾರಾಷ್ಟ್ರ 5 ಲಾರಿಗಳ ಮೇಲೆ ಕರಾವೇ ಕಾರ್ಯಕರ್ತರಿಂದ ಕಲ್ಲು ತೂರಾಟ |ಮುಂಭಾಗದ ಗ್ಲಾಸ್‌ ಪೀಸ್‌ ಪೀಸ್‌

0 comments


ಬೆಳಗಾವಿ : ಕರ್ನಾಟಕ-ಮಹಾರಾಷ್ಟ್ರ ಗಡಿ ವಿವಾದದ ಸಂಬಂಧ ಮಹಾರಾಷ್ಟ್ರ ಸಚಿವರು ಕ್ಯಾತೆ ತೆಗೆದಿದ್ದು, ಇಂದು ಬೆಳಗಾವಿಯಲ್ಲಿ ಕರ್ನಾಟಕ ರಕ್ಷಣಾ ವೇದಿಕೆ ಬೃಹತ್ ಪ್ರತಿಭಟನೆ ನಡೆಸುತ್ತಿದೆ.

ಬೆಳಗಾವಿಯ ಹಿರೇಬಾಗೇವಾಡಿ ಬಳಿಯ ಹೆದ್ದಾರಿಯಲ್ಲಿ ಕರವೇ ಕಾರ್ಯಕರ್ತರು ಮಹಾರಾಷ್ಟ್ರ ವಿರುದ್ಧ ಘೋಷಣೆ ಕೂಗಿ, ಮಹಾರಾಷ್ಟ್ರದಿಂದ ಬರುತ್ತಿರುವ ಲಾರಿಗಳ ಮೇಲೆ ಕಲ್ಲು ತೂರಾಟ ನಡೆಸಿದ್ದಾರೆ. ಕೆಲವೊಂದು ಲಾರಿಗಳ ಮೇಲೆ ಕಪ್ಪು ಮಸಿ ಬಳಿದು ಕರವೇ ಕಾರ್ಯಕರ್ತರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಕರ್ನಾಟಕದ ಬೆಳಗಾವಿಗೆ ಮಹಾರಾಷ್ಟ್ರ ಸಚಿವರು ಭೇಟಿ ನೀಡುವುದಾಗಿ ಹೇಳಿರುವ ಹಿನ್ನೆಲೆಯಲ್ಲಿ ಕರ್ನಾಟಕ ರಕ್ಷಣಾ ವೇದಿಕೆ ಕಾರ್ಯಕರ್ತರು ರೊಚ್ಚಿಗೆದಿದ್ದು, ಬೆಳಗಾವಿ ನಮ್ಮದು. ಎಂದು ಘೋಷಣೆ ಕೂಗುತ್ತ ಮಹಾರಾಷ್ಟ್ರದ 5 ಲಾರಿಗಳ ಮೇಲೆ ಕಲ್ಲು ತೂರಾಟ ಮಾಡಿದ್ದಾರೆ

You may also like

Leave a Comment