ದೇವಸ್ಥಾನದ ಒಳಗೆ ವ್ಯಕ್ತಿಯೋರ್ವ ಕೈಯಲ್ಲಿ ಮಚ್ಚು ಹಿಡಿದುಕೊಂಡು ಏಕಾಏಕಿ ನುಗ್ಗಿ ಆತಂಕಕಾರಿ ವಾತಾವರಣ ನಿರ್ಮಾಣ ಮಾಡಿದ ಘಟನೆಯೊಂದು ಉತ್ತರ ಪ್ರದೇಶದ ಗೋರಖನಾಥ ಮಂದಿರದಲ್ಲಿ ನಡೆದಿದೆ.
ಈ ಘಟನೆ ಎಪ್ರಿಲ್ 3 ರಂದು ಸಂಜೆ 7.45 ರ ಸುಮಾರಿಗೆ ನಡೆದಿದೆ. ಅಹ್ಮದ್ ಮುರ್ತಜಾ ಅಬ್ಬಾಸಿ ಎಂಬ ಯುವಕ ಮಂದಿರದ ಪ್ರವೇಶದ ಬಳಿ ಮೊದಲು ತಪಾಸಣೆಗೆ ಒಳಗಾಗಲು ನಿರಾಕರಿಸಿದ್ದಾನೆ. ನಂತರ ಹರಿತವಾದ ಆಯುಧ ತೆಗೆದು ಪೊಲೀಸರ ವಿರುದ್ಧ ಬೀಸಿ, ಇಬ್ಬರನ್ನು ಗಾಯಗೊಳಿಸಿದ್ದಾನೆ. ಈ ವೇಳೆ ಅಲ್ಲಾಹು ಅಕ್ಬರ್ ಎಂಬ ಘೋಷಣೆ ಕೂಗಿದ್ದಾನೆ ಎಂದು ಪ್ರತ್ಯಕ್ಷದರ್ಶಿಗಳು ಹೇಳಿದ್ದಾರೆ.
ಈ ಯುವಕ ಐಐಟಿ ಬಾಂಬೆಯಲ್ಲಿ ರಾಸಾಯನಿಕ ಎಂಜಿನಿಯರಿಂಗ್ ಪದವೀಧರ. ಪೊಲೀಸರಿಗೆ ಸಿಕ್ಕಿ ಬಿದ್ದ ನಂತರ ವಿಚಾರಣೆಯಲ್ಲಿ ತಾನು ಮಾನಸಿಕ ಅಸ್ವಸ್ಥತೆಯಿಂದ ಬಳಲುತ್ತಿರುವುದಾಗಿ ಹೇಳಿದ್ದಾನೆ.
ಈತನ ಈ ಹೇಳಿಕೆಯನ್ನು ಏಕಾಏಕಿ ನಂಬಬಾರದು ಎಂಬ ಮಾತು ಸಾಮಾಜಿಕ ಮಾಧ್ಯಮದಲ್ಲಿ ವಾದ ಒಂದು ಎದ್ದಿದೆ.
Murtaza Ahmed Abbasi attacked PAC Jawans at Gorakhnath Temple.
He did Chemical Engineering from IIT Mumbai.
After getting caught.. He said he wanted to be shot dead. To save him, he will be called mentally ill. Same script everytime. pic.twitter.com/DHjNJPy7Fv