Home » ಮಂಗಳೂರು : ವಿಹೆಚ್ ಪಿ – ಬಜರಂಗದಳ ಪ್ರತಿಭಟನೆ : ಸ್ಪಷ್ಟನೆ ನೀಡಿದ ಮಂಗಳೂರು ಪೊಲೀಸ್ ಆಯುಕ್ತ

ಮಂಗಳೂರು : ವಿಹೆಚ್ ಪಿ – ಬಜರಂಗದಳ ಪ್ರತಿಭಟನೆ : ಸ್ಪಷ್ಟನೆ ನೀಡಿದ ಮಂಗಳೂರು ಪೊಲೀಸ್ ಆಯುಕ್ತ

0 comments

ಪ್ರವಾದಿಯವರ ವಿರುದ್ಧ ಅವಹೇಳನಕಾರಿಯಾಗಿ ಹೇಳಿಕೆ ನೀಡಿದವರ ವಿರುದ್ಧ ಪ್ರತಿಭಟನೆ ಹೆಸರಿನಲ್ಲಿ ದೇಶದಾದ್ಯಂತ ಹಿಂಸೆ ನಡೆಸಿರುವುದನ್ನು ಖಂಡಿಸಿ ಜೂ.16 ರಂದು ಸಂಜೆ 3.00 ಗಂಟೆಗೆ ಪಿವಿಎಸ್ ವೃತ್ತದ ಬಳಿ ವಿಶ್ವಹಿಂದೂಪರಿಷತ್ – ಭಜರಂಗದಳ ಮಂಗಳೂರು ಇವರ ವತಿಯಿಂದ ಪ್ರತಿಭಟನಾ ಸಭೆ ನಡೆಸುವ ಬಗ್ಗೆ ಸಾಮಾಜಿಕ ಜಾಲತಾಣಗಳಲ್ಲಿ ಮತ್ತು ವಾಟ್ಸಾಪ್ ಗ್ರೂಪ್‌ಗಳಲ್ಲಿ ಸುದ್ದಿಯೊಂದು ಹರಿದಾಡುತ್ತಿದ್ದು ಈ ಬಗ್ಗೆ ಮಂಗಳೂರು ನಗರ ಪೊಲೀಸ್ ಆಯುಕ್ತ ಎನ್ ಶಶಿಕುಮಾರ್ ಸ್ಪಷ್ಟನೆ ನೀಡಿದ್ದಾರೆ.

ಸಾಮಾಜಿಕ ಜಾಲತಾಣಗಳಲ್ಲಿ ಪಿವಿಎಸ್ ವೃತ್ತದ ಬಳಿ ವಿಶ್ವಹಿಂದೂಪರಿಷತ್ – ಭಜರಂಗದಳ ಮಂಗಳೂರು ಇವರ ವತಿಯಿಂದ ಪ್ರತಿಭಟನಾ ಸಭೆ ನಡೆಯಲಿದೆ ಎಂದು ಸುದ್ದಿಗಳು ಹರಿದಾಡುತ್ತಿದೆ.

ಆದರೆ ಈ ಕುರಿತು ಅಧಿಕೃತವಾಗಿ ಅನುಮತಿ ಕೋರಿಕೆ ಪತ್ರವನ್ನು ಸಲ್ಲಿಸಿರುವುದು ಕಂಡು ಬರುವುದಿಲ್ಲ. ಆದಾಗ್ಯೂ ಸಹ ಹಾಲಿ ಕಾನೂನು ಮತ್ತು ಸುವ್ಯವಸ್ಥೆ ಹಾಗೂ ಸಾರ್ವಜನಿಕ ಭದ್ರತೆಯ ಹಿತದೃಷ್ಟಿಯಿಂದ ಯಾವುದೇ ಪ್ರತಿಭಟನೆಯನ್ನು ಮಾಡಲು ಅನುಮತಿ ನೀಡಿರುವುದಿಲ್ಲವಾಗಿ ಮಾಹಿತಿಯನ್ನು ತಿಳಿಯಪಡಿಸಲಾಗಿದೆ ಎಂದು ಸ್ಪಷ್ಟನೆ ನೀಡಿದ್ದಾರೆ.

You may also like

Leave a Comment