Home » Siddaramaiah: ಸಹಕಾರಿ ಬ್ಯಾಂಕ್ ಗಳಲ್ಲಿ ಸಾಲ ಮಾಡಿದವರಿಗೆ ಬಂಪರ್ ಗುಡ್ ನ್ಯೂಸ್- ಬಡ್ಡಿ ಮನ್ನಾ ಘೋಷಿಸಿದ ರಾಜ್ಯ ಸರ್ಕಾರ !!

Siddaramaiah: ಸಹಕಾರಿ ಬ್ಯಾಂಕ್ ಗಳಲ್ಲಿ ಸಾಲ ಮಾಡಿದವರಿಗೆ ಬಂಪರ್ ಗುಡ್ ನ್ಯೂಸ್- ಬಡ್ಡಿ ಮನ್ನಾ ಘೋಷಿಸಿದ ರಾಜ್ಯ ಸರ್ಕಾರ !!

0 comments

Siddaramaiah: ಬೆಳಗಾವಿಯ ಅಧಿವೇಶನದ ಕೊನೆ ದಿನದಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರೈತರಿಗೆ ಗುಡ್​ನ್ಯೂಸ್ ನೀಡಿದ್ದು, ಸಹಕಾರಿ ಬ್ಯಾಂಕ್‌ಗಳ (co-operative bank) ಸಾಲ ಮೇಲಿನ ಬಡ್ಡಿ ಮನ್ನಾ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ(Siddaramaiah) ಅವರು ಘೋಷಿಸಿದ್ದಾರೆ. ಉತ್ತರ ಕರ್ನಾಟಕದ ಅಭಿವೃದ್ಧಿ ಕುರಿತ ಚರ್ಚೆಗೆ ಉತ್ತರ ನೀಡುತ್ತಿರುವ ವೇಳೆ ಸಿಎಂ ಸಿದ್ದರಾಮಯ್ಯ ಹಲವು ಘೋಷಣೆಗಳನ್ನು ಮಾಡಿದರು. ಅದರಲ್ಲಿ ಬಡ್ಡಿ ಮನ್ನಾ ಪ್ರಸ್ತಾಪ ಕೂಡಾ ಮಾಡಿದ್ದಾರೆ.

ಸಿಎಂ ಸಿದ್ದರಾಮಯ್ಯ ಅವರು ಮಾಡಿದ ಘೋಷಣೆ ಇಂತಿವೆ :

* ನಂಜುಂಡಪ್ಪ ವರದಿಯ ಅನುಷ್ಠಾನ ಹಾಗೂ ಅದರ ಫಲಶ್ರುತಿ ಅಧ್ಯಯನ ಮಾಡಲು ನುರಿತ ಅರ್ಥಶಾಸ್ತ್ರಜ್ಞರೊಬ್ಬರ ಅಧ್ಯಕ್ಷತೆಯಲ್ಲಿ ಉನ್ನತಾಧಿಕಾರ ಸಮಿತಿ ರಚನೆ.

* ಬೆಳಗಾವಿ ಸಮೀಪ ಸುಮಾರು 2000 ಎಕರೆ ಪ್ರದೇಶದಲ್ಲಿ ಹೊಸ ಕೈಗಾರಿಕಾ ಪ್ರದೇಶ, 500 ಎಕರೆ ಪ್ರದೇಶದಲ್ಲಿ ಫೌಂಡ್ರಿ ಕ್ಲಸ್ಟರ್ ಸ್ಥಾಪನೆ ಹಾಗೂ ಬೆಳಗಾವಿ ಜಿಲ್ಲೆಯಲ್ಲಿ ಏರೋಸ್ಪೇಸ್ ಆಧಾರಿತ ಕೈಗಾರಿಕೆಗಳ ಬೆಳವಣಿಗೆಗೆ ವಿಶೇಷ ಒತ್ತು.

* ಧಾರವಾಡ ಸಮೀಪ ಸುಮಾರು 3000 ಎಕರೆ ಪ್ರದೇಶದಲ್ಲಿ ಹೊಸ ಕೈಗಾರಿಕಾ ಪ್ರದೇಶ ಸ್ಥಾಪನೆ.

ರಾಯಚೂರಿನಲ್ಲಿ ಹತ್ತಿ ಆಧಾರಿತ ಕೈಗಾರಿಕೆಗಳ ಸ್ಥಾಪನೆಗೆ ವಿಶೇಷ ಒತ್ತು.

* ವಿಜಯಪುರದಲ್ಲಿ ಉತ್ಪಾದನಾ ಕ್ಲಸ್ಟರ್ ಅಂದಾಜು 1500 ಎಕರೆ ಪ್ರದೇಶದಲ್ಲಿ ಸ್ಥಾಪನೆ.

* ಉತ್ತರ ಕರ್ನಾಟಕದ ಪ್ರವಾಸೋದ್ಯಮ ಅಭಿವೃದ್ಧಿಗೆ ಸಮಗ್ರ ಕ್ರಿಯಾ ಯೋಜನೆ ರೂಪಿಸಿ ಉದ್ಯೋಗಾವಕಾಶ ಸೃಷ್ಟಿಗೆ ಕ್ರಮ.

* ಧಾರವಾಡದಲ್ಲಿರುವ ಜಲ ಮತ್ತು ನೆಲ ನಿರ್ವಹಣೆ ಸಂಸ್ಥೆ ಉನ್ನತೀಕರಣ.

* ಸಹಕಾರ ಬ್ಯಾಂಕ್ ಗಳಲ್ಲಿರುವ ಮಧ್ಯಮಾವಧಿ ಮತ್ತು ದೀರ್ಘಾವಧಿ ಸಾಲದ ಅಸಲನ್ನು ಕಟ್ಟಿದರೆ ಸಂಪೂರ್ಣ ಬಡ್ಡಿ ಮನ್ನಾ.

ಆದರೆ ಸಾಲದ ಬಡ್ಡಿ ಮನ್ನಾ ವಿಚಾರದಲ್ಲಿ ವಿರೋಧ ಪಕ್ಷದ ನಾಯಕ ಆರ್ ಶೋಕ್ ಟೀಕಿಸಿದ್ದು, ರೈತರು ಅವಧಿಯೊಳಗೆ ಸಾಲ‌ ಕಟ್ಟಲ್ಲ, ನೀವು ಬಡ್ಡಿ ಮನ್ನಾ ಮಾಡಲ್ಲ. ಆದ್ದರಿಂದ ರೈತರ ಎರಡು ಲಕ್ಷ ರೂಪಾಯಿವರೆಗಿನ ಸಾಲ ಮನ್ನಾ ಮಾಡಬೇಕು ಮತ್ತು ಬರದಿಂದ ಕಂಗೆಟ್ಟ ರೈತರಿಗೆ ಪ್ರತಿ ಎಕರೆಗೆ 25 ಸಾವಿರ ರೂ. ಪರಿಹಾರ ನೀಡಿ ಎಂದು ಆಗ್ರಹಿಸಿದರು.

 

You may also like

Leave a Comment