Home » ಸುರಪಾನ ಪ್ರಿಯರೇ ನಿಮಗೊಂದು ಶಾಕಿಂಗ್ ನ್ಯೂಸ್! ಮದ್ಯದಂಗಡಿಗಳನ್ನು ಗೋ ಶಾಲೆಯನ್ನಾಗಿ ಪರಿವರ್ತಿಸುತ್ತಾರಂತೆ ಸಂಸದೆ ಉಮಾಭಾರತಿ!!

ಸುರಪಾನ ಪ್ರಿಯರೇ ನಿಮಗೊಂದು ಶಾಕಿಂಗ್ ನ್ಯೂಸ್! ಮದ್ಯದಂಗಡಿಗಳನ್ನು ಗೋ ಶಾಲೆಯನ್ನಾಗಿ ಪರಿವರ್ತಿಸುತ್ತಾರಂತೆ ಸಂಸದೆ ಉಮಾಭಾರತಿ!!

by ಹೊಸಕನ್ನಡ
0 comments

ಬಿಜೆಪಿ ನಾಯಕಿ ಉಮಾಭಾರತಿ ಅವರು ಯಾವಾಗಲೂ ತಮ್ಮ ಹೇಳಿಕೆಗಳಿಂದ ಸದಾ ಸುದ್ದಿಯಲ್ಲಿರುತ್ತಾರೆ. ಇದೀಗ ತಮ್ಮ ವಿಚಿತ್ರವಾದ ಹೇಳಿಕೆ ಇಂದ ಮಧ್ಯಪ್ರಿಯರನ್ನು ದಂಗುಬಡಿಸಿದ್ದಾರೆ. ಹೌದು ಶೀಘ್ರದಲ್ಲಿಯೇ ಮದ್ಯದಂಗಡಿಗಳನ್ನು ಗೋ ಶಾಲೆಯನ್ನಾಗಿ ಪರಿವರ್ತಿಸುವುದಾಗಿ ಹೇಳಿಕೆ ನೀಡಿದ್ದು, ಸುರಪಾನ ಪ್ರಿಯರಿಗೆ ಶಾಕ್ ಸುದ್ದಿ ಬಂದಂತಾಗಿದೆ.

ಕಳೆದ ನಾಲ್ಕು ದಿನಗಳಿಂದ ಉಮಾಭಾರತಿ ಭೋಪಾಲ್‍ನಲ್ಲಿ ಕ್ಷೇತ್ರ ಭೇಟಿ ಮಾಡುತ್ತಿದ್ದಾರೆ. ಕ್ಷೇತ್ರ ಭೇಟಿಯ ಕೊನೆಯ ದಿನವಾದ ಇಂದು ರಾಜ್ಯದಲ್ಲಿ ಆಲ್ಕೋಹಾಲ್ ಅನ್ನು ಕಡಿಮೆ ಮಾಡುವ ನಿಟ್ಟಿನಲ್ಲಿ ಶ್ರಮಿಸುತ್ತೇನೆ. ಹೀಗಾಗಿ ಈ ಹಿನ್ನೆಲೆಯಲ್ಲಿ ಶೀಘ್ರವೇ ಮದ್ಯದಂಗಡಿಗಳಲ್ಲಿ ಗೋ ಶಾಲೆಯನ್ನು ಆರಂಭಿಸುವುದಾಗಿ ಘೋಷಿಸಿದರು.

ಬಳಿಕ ರಾಜ್ಯ ಸರ್ಕಾರ ವಾಗ್ದಾಳಿ ನಡೆಸಿದ ಅವರು, ಮದ್ಯನೀತಿಯ ಕುರಿತು ಘೋಷಣೆ ಮಾಡಲು ಸರ್ಕಾರ ತಡಮಾಡುತ್ತಿದೆ ಎಂದು ಹರಿಹಾಯ್ದರು. ಅಲ್ಲದೆ ಓರ್ಚಾದಲ್ಲಿರುವ ಮದ್ಯದಂಗಡಿ ಹೊರಗೆ 11 ಹಸುಗಳನ್ನು ಕಟ್ಟಿಹಾಕಲು ವ್ಯವಸ್ಥೆ ಮಾಡಲು ತಿಳಿಸಿದ್ದೇನೆ. ಜೊತೆಗೆ ಅವುಗಳಿಗೆ ಮೇವು ಹಾಗೂ ನೀರಿನ ವಯವಸ್ಥೆಯನ್ನೂ ಮಾಡಲು ತಿಳಿಸಿದ್ದೇನೆ. ನನ್ನನ್ನು ತಡೆಯುವ ಧೈರ್ಯ ಯಾರಿಗಿದೆ ಎಂದು ನೋಡೋಣ ಎಂದು ಸವಾಲೆಸೆದರು.

ಭಗವಾನ್ ಶ್ರೀರಾಮಚಂದ್ರನ ಹೆಸರಿನಲ್ಲಿ ಸರ್ಕಾರಗಳು ರಚನೆಯಾಗುತ್ತಿವೆ. ಆದರೆ ಓರ್ಚಾದಲ್ಲಿರುವ ರಾಮರಾಜ ದೇವಸ್ಥಾನದ ಬಳಿ ಮದ್ಯದಂಗಡಿ ಯನ್ನು ತೆರೆಯಲು ಸರ್ಕಾರವೇ ಅನುಮತಿ ನೀಡಿರುವುದು ಬೇಸರದ ಸಂಗತಿ. ಬಿಜೆಪಿ ಆಡಳಿತವಿರುವ ಮಧ್ಯಪ್ರದೇಶವು ಮಹಿಳೆಯರ ಮೇಲೆ ಆಗುತ್ತಿರುವ ದೌರ್ಜನ್ಯದಲ್ಲಿ ಮುಂಚೂಣಿಯಲ್ಲಿದೆ. ಈ ಹಿಂಸೆಯ ಪ್ರವೃತ್ತಿಗೆ ಮದ್ಯ ಸೇವನೆಯು ಒಂದು ಕಾರಣ. ಹಾಗಾಗಿ ಮಧ್ಯ ಸಿಗುವ ಅಂಗಡಿಗಳನ್ನೇ ಮುಚ್ಚಿದರೆ, ಸಮಸ್ಯೆ ಬಗೆಹರಿದಂತೆ ಎಂದು ಅವರು ತಿಳಿಸಿದರು.

You may also like

Leave a Comment