4
Himanta Biswa Sarma: ರಾಜ್ಯದಲ್ಲಿ ತರಕಾರಿ ಬೆಳೆ ಭಾರೀ ಹೆಚ್ಚಳವಾಗಿದೆ. ಅದರಲ್ಲೂ ಟೊಮೆಟೊ ಬೆಲೆ ಗಗನಕ್ಕೇರಿದೆ. ಈ ಮಧ್ಯೆ ಅಸ್ಸಾಂನಲ್ಲಿ ತರಕಾರಿ ಬೆಲೆ ಹೆಚ್ಚಳಕ್ಕೆ ಬಾಂಗ್ಲಾ ಮೂಲದ ಮಿಯಾ ಮುಸ್ಲಿಮರೇ ಕಾರಣ ಎಂದು ಸಿಎಂ ಹಿಮಂತ ಬಿಸ್ವಾ ಶರ್ಮಾ (Himanta Biswa Sarma) ಆರೋಪಿಸಿದ್ದಾರೆ.
ಗುವಾಹಟಿಯಲ್ಲಿ ತರಕಾರಿ ವ್ಯಾಪಾರಿಗಳೆಲ್ಲಾ ಮಿಯಾ ಮುಸ್ಲಿಮರೇ ಆಗಿದ್ದಾರೆ. ಮಿಯಾ ವ್ಯಾಪಾರಿಗಳು ಹೆಚ್ಚಿನ ದರಕ್ಕೆ ತರಕಾರಿ ಮಾರುತ್ತಿದ್ದಾರೆ. ಆದರೆ ಹಳ್ಳಿಗಳಲ್ಲಿ ತರಕಾರಿಗಳ ಬೆಲೆ ಕಡಿಮೆಯಾಗಿದೆ. ಅಸ್ಸಾಂ ಜನ ಏನಾದರೂ ಇಂದು ತರಕಾರಿ ಮಾರಾಟ ಮಾಡುತ್ತಿದ್ದರೆ ಅವರು ಹೆಚ್ಚಿನ ಬೆಲೆ ಮಾರುತ್ತಿರಲಿಲ್ಲ ಎಂದು ಹೇಳಿದ್ದಾರೆ.
