Home » Accident: ಸರ್ಕಾರಿ ಬಸ್ಸು ಹಾಗೂ ಕಾರಿನ ನಡುವೆ ಅಪಘಾತ: ಇಬ್ಬರು ಸ್ಥಳದಲ್ಲೇ ಸಾವು

Accident: ಸರ್ಕಾರಿ ಬಸ್ಸು ಹಾಗೂ ಕಾರಿನ ನಡುವೆ ಅಪಘಾತ: ಇಬ್ಬರು ಸ್ಥಳದಲ್ಲೇ ಸಾವು

0 comments

Accident: ಸರ್ಕಾರಿ ಬಸ್ಸು ಹಾಗೂ ಕಾರಿನ ನಡುವೆ ಮುಖಾಮುಖಿ ಡಿಕ್ಕಿಯಾಗಿದ್ದು ಕಾರಿನಲ್ಲಿದಂತಹ ಇಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದು, ಇನ್ನೋರ್ವ ವ್ಯಕ್ತಿ ಗಾಯಗೊಂಡಿರುವ ಘಟನೆ ಹಾವೇರಿ ಜಿಲ್ಲೆ ರಾಣೇಬೆನ್ನೂರು ತಾಲೂಕಿನ ಕುಮಾರಪಟ್ಟಣಂ ಗ್ರಾಮದ ಬೈಪಾಸ್ ಬಳಿ ನಡೆದಿದೆ.

ಘಟನೆಯಲ್ಲಿ ದಾವಣಗೆರೆ ಮೂಲದ ಪ್ರವೀಣ (36) ಸಾವನ್ನಪ್ಪಿದ್ದು, ಇನ್ನೊಬ್ಬರ ಗುರುತು ಪತ್ತೆಯಾಗಿಲ್ಲ. ಅಪಘಾತದಲ್ಲಿ ಗಂಭೀರ ಗಾಯಗೊಂಡ ಕೊಟ್ಟೇಶ ಅಬಲೂರನ್ನು ದಾವಣಗೆರೆ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ಸಾರಿಗೆ ಬಸ್ ಅಥಣಿಯಿಂದ ದಾವಣಗೆರೆಗೆ ಹೊರಟ್ಟಿದ್ದು, ಬೈಪಾಸ್‌ನಲ್ಲಿ ಮುಖಾಮುಖಿ ಡಿಕ್ಕಿಯಾಗಿ ದುರ್ಘಟನೆ ಸಂಭವಿಸಿದೆ. ಈ ಸಂಬಂಧ ಕುಮಾರಪಟ್ಟಣಂ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

You may also like