7
Bantwala: ಬಿ.ಸಿ.ರೋಡಿನಲ್ಲಿ ಕಳೆದ ವಾರ ನಡೆದ ಅಪಘಾತದಲ್ಲಿ ಗಂಭೀರ ಗಾಯಗೊಂಡಿದ್ದ ಯುವ ನ್ಯಾಯವಾದಿ ಪ್ರಥಮ್ ಬಂಗೇರ (27) ಸೋಮವಾರ ಚಿಕಿತ್ಸೆಗೆ ಸ್ಪಂದಿಸದೇ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಮೃತ ಹೊಂದಿದ್ದಾರೆ.
ಪ್ರಥಮ್ ಅವರ ಅಂಗಾಂಗಳನ್ನು ದಾನ ಮಾಡುವ ಮೂಲಕ ಅವರ ಕುಟುಂಬ ನಿರ್ಧಾರ ಮಾಡಿದೆ. ಈ ಮೂಲಕ ಮಾನವೀಯತೆಯನ್ನು ಮೆರೆದಿದೆ. ಮೃತರ ಕಣ್ಣು, ಲಿವರ್, ಕರುಳಿನ ಭಾಗವನ್ನು ದಾನವಾಗಿ ನೀಡಲಾಗಿದೆ ಎಂದು ವರದಿಯಾಗಿದೆ.
