Home » ಕಾಂಗ್ರೆಸ್ ಯುವ ನಾಯಕಿ, ಸಾಮಾಜಿಕ ಕಾರ್ಯಕರ್ತೆ ನವ್ಯಶ್ರೀ ಪೊಲೀಸ್ ವಶಕ್ಕೆ!!!

ಕಾಂಗ್ರೆಸ್ ಯುವ ನಾಯಕಿ, ಸಾಮಾಜಿಕ ಕಾರ್ಯಕರ್ತೆ ನವ್ಯಶ್ರೀ ಪೊಲೀಸ್ ವಶಕ್ಕೆ!!!

by Mallika
0 comments

ಸ್ವಾತಂತ್ರ್ಯ ಮಹೋತ್ಸವ ಧ್ವಜಾರೋಹಣ ಸಂದರ್ಭದಲ್ಲಿ ಪ್ರತಿಭಟನೆ ನಡೆಸಲು ಉದ್ದೇಶಿಸಿದ್ದ ಕಾಂಗ್ರೆಸ್ ಯುವ ನಾಯಕಿ ಚನ್ನಪಟ್ಟಣ ಮೂಲದ ಸಾಮಾಜಿಕ ಕಾರ್ಯಕರ್ತೆ ನವ್ಯಶ್ರೀ ಅವರನ್ನು ಬೆಳಗಾವಿ ರಾಮಚಂದ್ರ ಹೋಟೆಲ್ ಬಳಿ ನವ್ಯಶ್ರೀ ವಶಕ್ಕೆ ಪಡೆದ ಪೊಲೀಸರು.

ಬೆಳಗಾವಿ ಜಿಲ್ಲಾ ಕ್ರೀಡಾಂಗಣದಲ್ಲಿ ಸ್ವಾತಂತ್ರ್ಯ ಮಹೋತ್ಸವ ಕಾರ್ಯಕ್ರಮ ಏರ್ಪಡಿಸಲಾಗಿತ್ತು. ಈ ಕಾರ್ಯಕ್ರಮ ನಡೆಯುವ ಸ್ಥಳಕ್ಕೆ ನುಗ್ಗಿ, ಉಸ್ತುವಾರಿ ಸಚಿವ ಗೋವಿಂದ ಕಾರಜೋಳ ಎದುರು ಪ್ರತಿಭಟನೆ ನಡೆಸಲು ನವ್ಯಶ್ರೀ ರಾವ್ ಉದ್ದೇಶಿಸಿದ್ದರು. ಅತ್ಯಾಚಾರ ಆರೋಪ ಎದುರಿಸುತ್ತಿರುವ ರಾಜಕುಮಾರ್ ಟಾಕಳೆ ಬಂಧಿಸುವಂತೆ ಪಟ್ಟು ಹಿಡಿದು ಪ್ರತಿಭಟನೆ ನಡೆಸಲು ಮುಂದಾಗಿದ್ದಳು.

ಕೆಲ ತಿಂಗಳ ಹಿಂದೆ ನವ್ಯಶ್ರೀ ರಾವ್, ತೋಟಗಾರಿಕೆ ಇಲಾಖೆಯ ಸಹಾಯಕ ನಿರ್ದೇಶಕ ರಾಜಕುಮಾರ ಟಾಕಳೆ ಜತೆ ಅಶ್ಲೀಲ ವೀಡಿಯೋ ಒಂದರಲ್ಲಿ ಕಾಣಿಸಿಕೊಂಡ ವೀಡಿಯೋ ಎಲ್ಲೆಡೆ ವೈರಲ್ ಆಗಿತ್ತು. ರಾಜಕುಮಾರ್ ಟಾಕಳೆ ವೀಡಿಯೋ ವೈರಲ್ ಮಾಡಿ ಮೋಸ ಮಾಡಿದ್ದಾನೆಂದು ನವ್ಯಶ್ರಿ ಈ ಸಂಬಂಧ ಎಪಿಎಂಸಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಳು. ಆದರೆ ಈ ಬಗ್ಗೆ ಇಲ್ಲಿಯವರೆಗೆ ಯಾವುದೇ ಕ್ರಮ ಕೈಗೊಳ್ಳದ್ದರಿಂದ ನವ್ಯಶ್ರೀ ರಾಜಕುಮಾರ್ ಟಾಕಳೆಯನ್ನು ಬಂದಿಸುವಂತೆ ಪ್ರತಿಭಟನೆಗೆ ನಿರ್ಧರಿಸಿದ್ದಳು.

ಪ್ರತಿಭಟನೆ ನಡೆಸುವ ಉದ್ದೇಶ ತಿಳಿದ ಪೊಲೀಸರು ಮುನ್ನೆಚ್ಚರಿಕೆ ಕ್ರಮವಾಗಿ ನವ್ಯಶ್ರೀ ರಾವ್ ಅವರನ್ನು ಬಂಧಿಸಿದ್ದಾರೆ. ನವ್ಯಶ್ರೀ ಅವರನ್ನು ವಶಕ್ಕೆ ಪಡೆದು ಬೆಳಗಾವಿ ಮಹಿಳಾ ಪೊಲೀಸ್ ಠಾಣೆಗೆ ಕರೆದೊಯ್ದಿದ್ದಾರೆ ಪೊಲೀಸರು.

banner

You may also like

Leave a Comment