ಬೆಳಾಲು: ಜ.14 ಶ್ರೀ ಅನಂತಪದ್ಮನಾಭ ದೇವಸ್ಥಾನ ಜಾತ್ರೋತ್ಸವ ಯಶಸ್ವಿಯ ಬಗ್ಗೆ ಅಭಿನಂದನಾ ಕಾರ್ಯಕ್ರಮ ಹಾಗೂ ಲೆಕ್ಕಪತ್ರ ಮಂಡನೆ. ಜ.14 ರಂದು ಮಕರ ಸಂಕ್ರಾಂತಿಯ ದಿನ ಶ್ರೀ ಕ್ಷೇತ್ರದ ವಠಾರದಲ್ಲಿ ನೆರವೇರಿತು. ಈ ಸಭಾಧ್ಯಕ್ಷತೆಯನ್ನು ಜಾತ್ರೋತ್ಸವ ಸಮಿತಿಯ ಪ್ರಧಾನ ಸಂಚಾಲಕರಾದ ಶ್ರೀ ಲಿಂಗಪ್ಪ ಪೂಜಾರಿ ಬನಂದೂರು ಇವರು ವಹಿಸಿಕೊಂಡರು.
ಅಭಿನಂದನಾ ಭಾಷಣಗಾರರಾಗಿ ಶ್ರೀಮತಿ ವಿಜಯ ಮುಖ್ಯೋಪಾಧ್ಯಾಯಿನಿ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆ ಪೆರಿಯಡ್ಕ ಇವರು ದೇವಸ್ಥಾನದ ಸ್ವಚ್ಛತೆ ಅಚ್ಚುಕಟ್ಟುತನ ಜಾತ್ರಾ ಮಹೋತ್ಸವದ ಯಶಸ್ವಿಗೆ ಸೇವೆ ಸಲ್ಲಿಸಿದ ಎಲ್ಲಾ ಪದಾಧಿಕಾರಿಗಳಿಗೆ ಹಾಗೂ ಊರ ಸಮಸ್ತ ಭಕ್ತ ಬಾಂಧವರಿಗೆ ತುಂಬು ಹೃದಯದ ಅಭಿನಂದನೆಯನ್ನು ಸಲ್ಲಿಸಿದರು. ದೇವಸ್ಥಾನದ ಪಾರದರ್ಶಕವಾದ ಲೆಕ್ಕಪತ್ರ ಮಂಡನೆಗೆ ಶ್ಲಾಘನೆ ವ್ಯಕ್ತಪಡಿಸಿ ದೇವಸ್ಥಾನವು ಜಿಲ್ಲೆಗೆ ಮಾದರಿ ದೇವಸ್ಥಾನ ಎಂದುಮೆಚ್ಚುಗೆ ವ್ಯಕ್ತ ಪಡಿಸಿದರು.

ವೇದಿಕೆಯಲ್ಲಿ ಕ್ಷೇತ್ರದ ಅಸ್ರಣ್ಣರಾದ ಗಿರೀಶ್ ಬಾರಿತಾಯ ಪಾರಲ, ವ್ಯವಸ್ಥಾಪನ ಸಮಿತಿಯ ಉಪಾಧ್ಯಕ್ಷರಾದ ಮಮತಾ ದಿನೇಶ್ ಪೂಜಾರಿ ಉಪ್ಪಾರು,ಮಹಿಳಾ ಸಮಿತಿಯ ಗೌರವಾಧ್ಯಕ್ಷರಾದ ಶ್ರೀಮತಿ ವಿದ್ಯಾ ಶ್ರೀನಿವಾಸ್ ಗೌಡ,ಅನಂತೇಶ್ವರ ಭಜನಾ ಮಂಡಳಿಯ ಅಧ್ಯಕ್ಷರಾದ ಹರೀಶ್ ಪೋಸೊಟ್ಟು ಹಾಗೂ ಊರಿನ ಸಮಸ್ತ ಭಕ್ತಾದಿಗಳು ಉಪಸ್ಥಿತರಿದ್ದರು. ಇದೇ ಸಂದರ್ಭದಲ್ಲಿ ಅನಂತೋಡಿ ಶ್ರೀ ಅನಂತೇಶ್ವರ ಫ್ರೆಂಡ್ಸ್ ಇವರ ನಿರ್ವಹಣೆಯಲ್ಲಿ ಶ್ರೀ ಬೆಂಕಿನಾಥೇಶ್ವರ ಕೃಪಾಪೋಷಿತ ದಶಾವತಾರ ಯಕ್ಷಗಾನ ಮಂಡಳಿ ಬಾಳ – ಕಳವಾರು ಇವರಿಂದ ನಾಗರ ಪಂಚಮಿ ಎಂಬ ತುಳು ಯಕ್ಷಗಾನ ಪ್ರದರ್ಶನ ನಡೆಯಿತು.

