4
Udupi: ರಾಷ್ಟ್ರೀಯ ಹೆದ್ದಾರಿ 66ರ ಬ್ರಹ್ಮಾವರ ಮಹೇಶ್ ಆಸ್ಪತ್ರೆ ಸಮೀಪ ಅವೈಜ್ಞಾನಿಕ ರಸ್ತೆ ನಿರ್ಮಾಣದಿಂದ ಪದೇ ಪದೇ ಅಪಘಾತಗಳು ಸಂಭವಿಸುತ್ತಿದ್ದು, ಇತ್ತೀಚೆಗೆ ನಡೆದ ಭೀಕರ ಅಪಘಾತದಲ್ಲಿ ವಿದ್ಯಾರ್ಥಿಯೊಬ್ಬ ಮೃತಪಟ್ಟಿದ್ದಾನೆ. ಈ ಘಟನೆಗೆ ಜನರ ಆಕ್ರೋಶ ಹೆಚ್ಚಿದ್ದು, ಏಪ್ರಿಲ್ 2 ಬುಧವಾರ ಬೃಹತ್ ಪ್ರತಿಭಟನೆ ನಡೆಯಿತು.
ಮಂಗಳವಾರ ನಡೆದ ಅಪಘಾತಕ್ಕೆ ಪ್ರತಿಯಾಗಿ, ಬ್ರಹ್ಮಾವರ ಎಸ್.ಎಮ್.ಎಸ್ ಕಾಲೇಜಿನಿಂದ ತಾಲೂಕು ಕಛೇರಿ ತನಕ ಶಾಂತಿಯುತ ಜಾಥಾ ನಡೆಸಿ, ಬಳಿಕ ಬೃಹತ್ ಪ್ರತಿಭಟನೆ ನಡೆಸಲಾಯಿತು. ಪ್ರತಿಭಟನೆಯಲ್ಲಿ ಸ್ಥಳೀಯರು, ವಿದ್ಯಾರ್ಥಿಗಳು ಹಾಗೂ ವಿವಿಧ ಸಂಘಟನೆಗಳು ಭಾಗವಹಿಸಿ, ಸಮರ್ಪಕ ಸರ್ವಿಸ್ ರಸ್ತೆ ಮತ್ತು ಫ್ಲೈ ಓವರ್ ನಿರ್ಮಾಣಕ್ಕೆ ಆಗ್ರಹಿಸಲಾಗಿದೆ.
