Chinnaswamy Stadium Stampede Case: ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ನಡೆದ ಕಾಲ್ತುಳಿತ ಪ್ರಕರಣಕ್ಕೆ ಸಂಬಂಧಪಟ್ಟಂತೆ ಬೆಂಗಳೂರು ನಗರ ಪೊಲೀಸ್ ಆಯುಕ್ತ ಬಿ ದಯಾನಂದ್ ಅವರನ್ನು ಅಮಾನತು ಮಾಡಿದ್ದಕ್ಕೆ ನಿವೃತ್ತ ಐಪಿಎಸ್ ಅಧಿಕಾರಿ ಭಾಸ್ಕರ್ ರಾವ್ ಅವರು ಕಿಡಿಕಾರಿದ್ದಾರೆ.
ಶ್ರೀ ಸಿದ್ದರಾಮಯ್ಯ ಅವರು ಭಯಭೀತರಾಗಿದ್ದಾರೆ. ಬೆಂಗಳೂರು ನಗರ ಪೊಲೀಸ್ ಆಯುಕ್ತರ ಅಮಾನತು ಕರ್ನಾಟಕ ಪೊಲೀಸ್ ಇತಿಹಾಸದಲ್ಲಿ ಅತ್ಯಂತ ಕರಾಳ ದಿನವಾಗಿದೆ. ದಯಾನಂದ್ ಸತ್ಯ ಹೇಳಿದ್ದಕ್ಕೆ ಬಹುಮಾನ ದೊರಕಿದೆ. ದಯಾನಂದ್ಮತ್ತು ಅವರ ತಂಡ ಬೆಂಗಳೂರನ್ನು ಸುರಕ್ಷಿತವಾಗಿಡಲು ಇಡೀ ರಾತ್ರಿ ಶ್ರಮಿಸಿದರು.
ಡೆತ್ ಮಾರ್ಚ್ ಅನ್ನು ಆಯೋಜಿಸಿದ ನಿಯಂತ್ರಿಸಲಾಗದ ಉಪಮುಖ್ಯಮಂತ್ರಿಯೇ ಪ್ರಮುಖ ಅಪರಾಧಿ ಎಂದು ಕರ್ನಾಟಕದ ಎಲ್ಲರಿಗೂ ತಿಳಿದಿದೆ. ಯಾವುದೇ ಮುಖ್ಯಮಂತ್ರಿ ಇಷ್ಟು ಅಸಹಾಯಕ, ಹೇಡಿಯಾಗಲು ಸಾಧ್ಯವಿಲ್ಲ. ಸರ್ಕಾರವು ತನ್ನ ಕೈಗಳ ಮೇಲೆ ರಕ್ತವನ್ನು ಅಂಟಿಸಿಕೊಂಡಿದೆ ಮತ್ತು ಈಗ ತನ್ನ ನಿಯಂತ್ರಣ ಕಳೆದುಕೊಂಡಿದೆ. ಸರ್ಕಾರವು ಈಗ ಅಪಾಯದಲ್ಲಿದೆ ಎಂದು ಎಕ್ಸ್ನಲ್ಲಿ ಬರೆದಿದ್ದಾರೆ.
Mr Siddaramiah has gone into Panic mode. The suspension of Bengaluru City Police Commissioner is the darkest day in the History of Karnataka Police.
The prize for telling the Truth and he and his Team slogged the whole night to keep Bengaluru Safe.
Everyone in Karnataka knows… pic.twitter.com/iYFsMEihGg— Bhaskar Rao (@Nimmabhaskar22) June 5, 2025
