1
CM Siddaramaiah : ಧರ್ಮಸ್ಥಳದಲ್ಲಿ (Dharmasthala Case) ತನಿಖೆಯ ವೇಳೆ ಉಂಟಾದ ಎರಡು ಗುಂಪುಗಳ ಘರ್ಷಣೆ ಸಂಬಂಧಪಟ್ಟಂತೆ ಸಿಎಂ ಸಿದ್ದರಾಮಯ್ಯ (CM Siddaramaiah) ಪ್ರತಿಕ್ರಿಯಿಸಿದ್ದು, ಯಾರೇ ತಪ್ಪು ಮಾಡಿದರು ಅವರ ಮೇಲೆ ಕಾನೂನು ರೀತಿ ಕ್ರಮ ಕೈಗೊಳ್ಳಲಾಗುತ್ತದೆ ಎಂದು ತಿಳಿಸಿದ್ದಾರೆ.
ಈ ಬಗ್ಗೆ ಮಾತನಾಡಿದ ಸಿದ್ದರಾಮಯ್ಯ ಅವರು, ಧರ್ಮಸ್ಥಳದಲ್ಲಿ ನಡೆದ ಗಲಾಟೆಯಲ್ಲಿ ಯಾರೇ ಭಾಗಿಯಾಗಿದ್ದರೂ ಶಿಕ್ಷೆ ಆಗೇ ಆಗುತ್ತದೆ. ಕಾನೂನು ಎಲ್ಲರಿಗೂ ಒಂದೇ, ಈಗಾಗಲೇ ಪೊಲೀಸರು ತನಿಖೆ ನಡೆಸುತ್ತಿದ್ದು, ಆದಷ್ಟು ಬೇಗ ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದರು.
