Free Bus: ರಾಜ್ಯ ಸರ್ಕಾರ ತಾನು ಅಧಿಕಾರಕ್ಕೆ ಬರುವ ಹೊತ್ತಿನಲ್ಲಿ ಪಂಚ ಗ್ಯಾರಂಟಿಗಳನ್ನು ಘೋಷಿಸಿತ್ತು. ಇದರಲ್ಲಿ ಮಹಿಳೆಯರಿಗೆ ಸರ್ಕಾರಿ ಬಸ್ಸಿನಲ್ಲಿ ಉಚಿತವಾಗಿ ಪ್ರಯಾಣಿಸುವಂತಹ ‘ಶಕ್ತಿ ಯೋಜನೆ’ ಕೂಡ ಒಂದು. ಈ ಯೋಜನೆ ಜಾರಿಯಾದ ಬಳಿಕ ಬಸ್ಸಿನಲ್ಲಿ ಮಹಿಳೆಯರೇ ಕಿಕ್ಕಿರಿದು ಸೇರಿರುತ್ತಾರೆ. ಪುರುಷರಿಗೆ ಕೂರಲು ಬಿಡಿ ನಿಲ್ಲಲು ಕೂಡ ಸ್ಥಳವಕಾಶ ಇರುವುದಿಲ್ಲ. ಈ ಹಿನ್ನೆಲೆಯಲ್ಲಿ ಪುರುಷರಿಗೂ ಕೂಡ ಉಚಿತ ಪ್ರಯಾಣ ನೀಡಬೇಕೆಂದು ಹಲವರು ಆಗ್ರಹಿಸಿದ್ದರು. ಇದೀಗ ಈ ಕುರಿತಾಗಿ ಸರ್ಕಾರ ತನ್ನ ಮುಂದಿನ ಬಜೆಟ್ ನಲ್ಲಿ ಪುರುಷರಿಗೆ ಗುಡ್ ನ್ಯೂಸ್ ಅನ್ನು ನೀಡಲಿದೆ ಎನ್ನಲಾಗಿದೆ.
ಹೌದು, ರಾಜ್ಯ ಸರ್ಕಾರ ಪುರುಷರಿಗೂ ಕೂಡ ಉಚಿತ ಬಸ್ ಪ್ರಯಾಣವನ್ನು ಕಲ್ಪಿಸಲು ಚಿಂತನೆ ನಡೆಸಿದೆ ಎನ್ನಲಾಗಿದೆ. ಆದರೆ ಎಲ್ಲಾ ಪುರುಷರಿಗೂ ಕೂಡ ಉಚಿತ ಬಸ್ ಪ್ರಯಾಣ ಇರುವುದಿಲ್ಲ. ಕಿಡ್ನಿ ಸಮಸ್ಯೆಯಿಂದ ಬಳಲುತ್ತಿದ್ದು ಡಯಾಲಿಸಿಸ್ ಗೆ ಒಳಗಾಗುತ್ತಿರುವ ರೋಗಿಗಳಿಗೆ ಫ್ರೀ ಬಸ್ ವ್ಯವಸ್ಥೆ ಮಾಡಲಾಗುವುದು ಎಂಬ ಸುದ್ದಿ ಬಂದಿದೆ.
ಇತ್ತೀಚೆಗೆ ರಾಜ್ಯದಲ್ಲಿ ಹಲವು ಕಾಯಿಲೆಗಳು ಏರಿಕೆಯಾಗುತ್ತಿದೆ. ಇದರಿಂದ ಎಚ್ಚೆತ್ತ ಕಾಂಗ್ರೆಸ್ ನಾಯಕ, ಸ್ಪೀಕರ್ ಯುಟಿ ಖಾದರ್ ಇದೀಗ ಡಯಾಲಿಸಿಸ್ಗೆ ಒಳಗಾದ ಗಂಡಸರಿಗೆ ಶಕ್ತಿಯೋಜನೆ ವಿಸ್ತರಿಸಲು ಮನವಿ ಮಾಡಿದ್ದಾರೆ. ಇನ್ನು ಈ ಬಗ್ಗೆ ಸಿಎಂ ಸಿದ್ದರಾಮಯ್ಯ ಅವರಿಗೆ ಪತ್ರ ಬರೆದು ಮನವಿಯನ್ನೂ ಮಾಡಿದ್ದಾರೆ. ಹೀಗಾಗಿ ಈ ಬಜೆಟ್ ಮಂಡನೆಯಲ್ಲಿ ಸಿದ್ದರಾಮಯ್ಯ ಅವರು ಈ ಕುರಿತು ಏನು ನಿರ್ಧಾರ ಕೈಗೊಳ್ಳುತ್ತಾರೆ ಎಂಬುದನ್ನು ಕಾದು ನೋಡಬೇಕಿದೆ.
