Home » Karnataka Gvt : ರಾಜ್ಯ ಸರ್ಕಾರಿ ನೌಕರರಿಗೆ ಸಹಿಸುದ್ದಿ – ‘MSIL ಸೂಪರ್ ಮಾರ್ಕೆಟ್’ ತೆರೆಯಲು ಮುಂದಾದ ಸರ್ಕಾರ

Karnataka Gvt : ರಾಜ್ಯ ಸರ್ಕಾರಿ ನೌಕರರಿಗೆ ಸಹಿಸುದ್ದಿ – ‘MSIL ಸೂಪರ್ ಮಾರ್ಕೆಟ್’ ತೆರೆಯಲು ಮುಂದಾದ ಸರ್ಕಾರ

0 comments

 

Karnataka Gvt : ರಾಜ್ಯ ಸರ್ಕಾರಿ ನೌಕರರಿಗೆ ಸರ್ಕಾರವು ಸಿಹಿ ಸುದ್ದಿ ಒಂದನ್ನು ನೀಡಿದ್ದು ಪೊಲೀಸ್ ಕ್ಯಾಂಟೀನ್ ಮಾದರಿಯಲ್ಲಿ ಎಂಎಸ್ಐಎಲ್ ಸೂಪರ್ ಮಾರ್ಕೆಟ್ ಅನ್ನು ತೆರೆಯಲು ಚಿಂತನೆ ನಡೆಸಿದೆ ಎಂದು ತಿಳಿದು ಬಂದಿದೆ.

 

ಹೌದು, ರಾಜ್ಯ ಸರಕಾರಿ ನೌಕರರಿಗೆ ದಿನನಿತ್ಯದ ಬದುಕಿಗೆ ಅಗತ್ಯವಿರುವ ಪ್ರತಿಯೊಂದು ವಸ್ತುವೂ ರಿಯಾಯಿತಿ ದರದಲ್ಲಿ ಸಿಗಬೇಕೆಂಬ ಉದ್ದೇಶದೊಂದಿಗೆ ಸರಕಾರಿ ಸ್ವಾಮ್ಯದ ಎಂಎಸ್‌ಐಎಲ್‌ ವತಿಯಿಂದ ಸೂಪರ್‌ ಮಾರ್ಕೆಟ್‌ ಆರಂಭಿಸುವ ಚಿಂತನೆ ಇದೆ ಎಂದು ಬೃಹತ್‌ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ ಬಿ ಪಾಟೀಲ ತಿಳಿಸಿದ್ದಾರೆ.

 

ಎಂಎಸ್‌ಐಎಲ್ ವ್ಯವಸ್ಥಾಪಕ ನಿರ್ದೇಶಕ ಮನೋಜ ಕುಮಾರ ಸೇರಿದಂತೆ ಇತರ ಹಿರಿಯ ಅಧಿಕಾರಿಗಳೊಂದಿಗೆ ಬುಧವಾರ ಪ್ರಾಥಮಿಕ ಸುತ್ತಿನ ಸಭೆ ನಡೆಸಿ ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿದ ಸಚಿವರು ರಾಜ್ಯದ ಪೊಲೀಸ್, ಅರೆ ಸೇನಾ ಪಡೆಗಳ ನೌಕರರಿಗೆ ಈ ರೀತಿಯ ಕ್ಯಾಂಟೀನ್‌ ಸೌಲಭ್ಯವಿದೆ. ರಾಜ್ಯದಲ್ಲಿ 6 ಲಕ್ಷ ಸರಕಾರಿ ನೌಕರರಿದ್ದಾರೆ. ಅವರ ಕುಟುಂಬಗಳ ಹಿತದೃಷ್ಟಿಯಿಂದ ಇಂಥದ್ದೊಂದು ಉಪಕ್ರಮ ಆರಂಭಿಸುವುದು ನಮ್ಮ ಚಿಂತನೆಯಾಗಿದೆ. ಇದಕ್ಕೆ ಸಬ್ಸಿಡಿ ಅಥವಾ ತೆರಿಗೆ ವಿನಾಯಿತಿ ಪಡೆದುಕೊಳ್ಳುವುದು ಹೇಗೆಂದು ಆರ್ಥಿಕ ಇಲಾಖೆಯ ಜತೆ ಚರ್ಚಿಸಲಾಗುವುದು. ಒಟ್ಟಿನಲ್ಲಿ ಇಂತಹ ಸೂಪರ್‌ ಮಾರ್ಕೆಟ್‌ ಮಳಿಗೆ ಆರಂಭಿಸುವ ಸಾಧ್ಯಾಸಾಧ್ಯತೆ ಕುರಿತು ತಮಗೆ ಒಂದು ತಿಂಗಳಲ್ಲಿ ವಿಸ್ತೃತ ವರದಿ ಸಲ್ಲಿಸುವಂತೆ ಎಂಎಸ್‌ಐಎಲ್‌ಗೆ ಸೂಚಿಸಲಾಗಿದೆ ಎಂದಿದ್ದಾರೆ.

 

ಅಲ್ಲದೆ ಉದ್ದೇಶಿತ ಎಂಎಸ್‌ಐಎಲ್‌ ಸೂಪರ್‌ ಮಾರ್ಕೆಟ್‌ನಲ್ಲಿ ನಮ್ಮ ಸರಕಾರಿ ನೌಕರರ ದಿನನಿತ್ಯದ ಬದುಕಿಗೆ ಬೇಕಾದ ದವಸ-ಧಾನ್ಯದಿಂದ ಹಿಡಿದು ಎಫ್‌ಎಂಸಿಜಿ ವಲಯದಲ್ಲಿ ಬರುವ ಪ್ರತಿಯೊಂದು ಪದಾರ್ಥವೂ ರಿಯಾಯಿತಿ ದರದಲ್ಲಿ ಸಿಗುವಂತಾದರೆ ಚೆನ್ನಾಗಿರುತ್ತದೆ. ಮೊದಲ ಹಂತದಲ್ಲಿ ಬೆಂಗಳೂರಿನಲ್ಲಿ 4-5 ಮಳಿಗೆಗಳನ್ನು ತೆರೆಯುವ ಆಲೋಚನೆ ಇದೆ. ನಂತರದ ದಿನಗಳಲ್ಲಿ ಜಿಲ್ಲಾ ಕೇಂದ್ರಗಳಲ್ಲೂ ಇಂತಹ ಸೌಲಭ್ಯ ವಿಸ್ತರಣೆಗೆ ಮುಂದಾಗಬಹುದು. ಒಟ್ಟಿನಲ್ಲಿ ಅಧ್ಯಯನ ವರದಿ ಬಂದ ನಂತರ ತೀರ್ಮಾನಿಸಲಾಗುವುದು ಎಂದು ಅವರು ಹೇಳಿದ್ದಾರೆ.

You may also like