3
Belthangady: ಬೆಳ್ತಂಗಡಿ ತಾಲೂಕಿನ ಕಡಿರುದ್ಯಾವರ ಗ್ರಾಮದ ಕಾರ್ನಪ-ದುಂಬೆಟ್ಟು ರಸ್ತೆಯಲ್ಲಿ ಮೆಸ್ಕಾಂ ಇಲಾಖೆಯ ಹೈ ಪವರ್ ಲೈನ್ನಲ್ಲಿ ವಿದ್ಯುತ್ ಪ್ರವಹಿಸಿ ತಂತಿ ತುಂಡಾಗಿ ರಸ್ತೆಯಲ್ಲಿ ಬೈಕ್ನಲ್ಲಿ ಹೋಗುತ್ತಿದ್ದ ಯುವಕರ ಮೇಲೆ ಬಿದ್ದಿದೆ.
ಈ ಘಟನೆಯಲ್ಲಿ ಬೈಕ್ ಸವಾರರಾದ ಮಂಜುನಾಥ, ಆದರ್ಶ ಎಂಬುವವರಿಗೆ ಕರೆಂಟ್ ಶಾಕ್ ಹೊಡೆದಿದ್ದು, ಸಣ್ಣಪುಟ್ಟ ಗಾಯಗಳೊಂದಿಗೆ ಪಾರಾಗಿದ್ದಾರೆ ಎಂದು ವರದಿಯಾಗಿದೆ.
